ಬೆಂಗಳೂರು: ಏನೇ ಭಿನ್ನಾಭಿಪ್ರಾಯ ಇದ್ದರೂ ಹೊಂದಾಣಿಕೆ ಮಾಡಿಕೊಂಡು 2028ರ ಚುನಾವಣೆಯ ಗುರಿ ಇಟ್ಟುಕೊಳ್ಳಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡು 2028ರ ಚುನಾವಣೆಯ ಗುರಿ ಇಟ್ಟುಕೊಳ್ಳಬೇಕು. ಈಗ ಎಷ್ಟು ಸ್ಥಾನ ಇದೆಯೋ ಅದಕ್ಕಿಂತ ಹೆಚ್ಚು ಸ್ಥಾನ ಪಡೆಯಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು.
Advertisement
ಎಷ್ಟು ಸ್ಥಾನ ಪಡೆಯುತ್ತೇವೆ ಎಂಬುದರ ಮೇಲೆ ನಿಮ್ಮ ಭವಿಷ್ಯ, ಪಕ್ಷದ ಭವಿಷ್ಯ ನಿಂತಿದೆ. 2028ರ ಚುನಾವಣೆಗೆ ಎಲ್ಲರು ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ. ಇನ್ನೂ ಬಹಳ ವರ್ಷಗಳಿಂದ ಪಕ್ಷಕ್ಕಾಗಿ ದುಡಿದವರಿಗೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಾವೆಲ್ಲ ಮಾತಾಡಿ, ಬಹಳ ಒತ್ತಡ ಹೇರಿ ಈ ಸ್ಥಾನ ಬಾದರ್ಲಿಗೆ ಕೊಡಲಾಗಿದೆ. ಪಕ್ಷಕ್ಕೆ ದೊಡ್ಡ ಆಸ್ತಿ ಆಗಬೇಕು ಎಂದು ಹೇಳಿದರು.