ಮಂಡ್ಯ: ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಗವಿಮಠದಲ್ಲಿರುವ ಗವಿಮಠದ ಶ್ರೀ ಸ್ವತಂತ್ರ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಮನೆದೇವರಾಗಿರುವ ಸ್ವತಂತ್ರ ಸಿದ್ದಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Advertisement
ಬಳಿಕ ಬೂಕನಕೆರೆ ಗೋಗಾಲಮ್ಮ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಂದಹಾಗೆ, ಮನೆ ದೇವರು ಸ್ವತಂತ್ರ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ 4 ವರ್ಷಗಳ ಹಿಂದೆ ಯಡಿಯೂರಪ್ಪ ಭೇಟಿ ನೀಡಿದ್ದರು. ಮನೆದೇವರ ದೇವಾಲಯದ ಮುಂದೆ ಹರಿಯುವ ಹಳ್ಳದ ಅವ್ಯವಸ್ಥೆ ನೋಡಿ ಬೇಸರಗೊಂಡ ಬಿಎಸ್ವೈ. ಕೂಡಲೇ ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗೆ ತಿಳಿಸಿವಂತೆ ಸೂಚನೆ ನೀಡಿದ್ದಾರೆ.