ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಶಿಕ್ಷಣ ಇಲಾಖೆಯಿಂದ ನಡೆಯುತ್ತಿರುವ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಕ್ಕೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಜಿಲ್ಲಾಧ್ಯಕ್ಷರಾದ ಬಸಲಿಂಗಪ್ಪ ಮುಂಡರಗಿ ನೇತೃತ್ವದಲ್ಲಿ, ರೋಣ ತಾಲೂಕಿನ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಯೋಗದೊಂದಿಗೆ ರೋಣ ತಾಲೂಕಿನ ಬೆಳವಣಿಕಿ ಗ್ರಾಮದ ಶ್ರೀ ವೀರಭದ್ರೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪರೀಕ್ಷಾ ಕೇಂದ್ರಕ್ಕೆ ಬಂದೋಬಸ್ತ್ ನೀಡಲಾಯಿತು.
ಶ್ರೀ ವೀರಭದ್ರೇಶ್ವರ ಪದವಿಪೂರ್ವ ಮಹಾವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಹಲವು ವರ್ಷಗಳಿಂದ ಕಿಡಿಗೇಡಿಗಳು ಪರೀಕ್ಷೆಗೆ ಅಡ್ಡಿಯನ್ನುಂಟುಮಾಡುವ ಘಟನೆಗಳು ನಡೆಯುತ್ತಿದ್ದು, ಕಳೆದೆರಡು ವರ್ಷಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಕ್ಕೆ ಅಚ್ಚುಕಟ್ಟಾಗಿ ಬಂದೋಬಸ್ತ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗದಗ ಮತ್ತು ರೋಣ ತಾಲೂಕಿನ ಎಲ್ಲಾ ಮಾಜಿ ಸೈನಿಕರು ಮತ್ತು ರೋಣ ತಾಲೂಕಿನ ಪೊಲೀಸ್ ಸಿಬ್ಬಂದಿಯವರು ಸಹಕಾರ ನೀಡಿದರು.