ವಿಜಯಸಾಕ್ಷಿ ಸುದ್ದಿ, ರೋಣ: ಗದಗ ಜಿಲ್ಲಾ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾಕೂಟಗಳಲ್ಲಿ ಜರುಗಿದ ಭಾರ ಎತ್ತುವ ಸ್ಪರ್ಧೆಯಲ್ಲಿ ರೋಣ ತಾಲೂಕಿನ ಅಬಕಾರಿ ಇಲಾಖೆಯ ಸಿಬ್ಬಂದಿಗಳು ಜಯ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರೋಣ ಅಬಕಾರಿ ಉಪ ನಿರೀಕ್ಷಕ ಜಗದೀಶ ಆಲದಕಟ್ಟಿ 108 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ದರ್ಜೆ ಸಹಾಯಕರು ಹಾಗೂ ತಾಲೂಕಾ ನೌಕರರ ಸಂಘದ ಉಪಾಧ್ಯಕ್ಷ ಭರತಕುಮಾರ ಹಾದಿಮನಿ 56 ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಜಿಲ್ಲಾ ಅಬಕಾರಿ ಉಪ ಆಯುಕ್ತರ ಕಚೇರಿ ಪೇದೆ ನಿಂಗಪ್ಪ ಶಿರಗುಪ್ಪಿ 86 ಕೆಜಿ ವಿಭಾಗದಲ್ಲಿ ಜಯಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲಾ ಮಟ್ಟದ ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ವಿಜೇತ ಕ್ರೀಡಾಳುಗಳನ್ನು ಅಭಿನಂದಿಸಿದ್ದಾರೆ.



