32.1 C
Gadag
Saturday, April 1, 2023

Exclusive…ಬ್ಯಾಂಕ್ ದರೋಡೆಕೋರರ ಬಂಧನ

Spread the love

ವಿಜಯಸಾಕ್ಷಿ ಸುದ್ದಿ ಕೊಪ್ಪಳ
ಈಚೆಗೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಬ್ಯಾಂಕ್‌ಗೆ ಕನ್ನ ಹಾಕಿದ್ದು, ಜಿಲ್ಲೆಯಲ್ಲಿ ಇದುವರೆಗೂ ನಡೆದ ದೊಡ್ಡ ದರೋಡೆ ಎಂಬ ಕುಖ್ಯಾತಿ ಹೊಂದಿತ್ತು.
ಸೆಪ್ಟೆಂಬರ್ 23ರಂದು ಬೇವೂರಿನ ಗ್ರಾಮೀಣ ಬ್ಯಾಂಕ್‌ಗೆ ಕನ್ನ ಹಾಕಿದ್ದ ಖದೀಮರು, 3.76 ಕೆಜಿ ಬಂಗಾರ, 21.75 ಲಕ್ಷ ರೂಪಾಯಿ ನಗದು ದೋಚಿ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ 4 ವಿಶೇಷ ತನಿಖಾ ತಂಡ ರಚಿಸಿದ್ದ ಎಸ್ಪಿ ಜಿ.ಸಂಗೀತಾ ಅವರು ದರೋಡೆಕೋರರ ಪತ್ತೆಗೆ ಜಾಲ ಬೀಸಿದ್ದರು.
ಮಹಾರಾಷ್ಟ್ರ ಮೂಲದ ದರೋಡೆಕೋರರು ಪೊಲೀಸ್ ಬಲೆಗೆ ಬಿದ್ದಿದ್ದು, ನಗದು ಹಾಗೂ ಬಂಗಾರ ವಶಪಡಿಸಿಕೊಳ್ಳಲಾಗಿದೆ. ಈ ಕುರಿತ ಸಮಗ್ರ ಮಾಹಿತಿಯನ್ನು ಅಕ್ಟೋಬರ್ 8ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗುವುದು ಎಂದು ಎಸ್ಪಿ ಜಿ.ಸಂಗೀತಾ ವಿಜಯಸಾಕ್ಷಿಗೆ ತಿಳಿಸಿದರು.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike
3,753FollowersFollow
0SubscribersSubscribe
- Advertisement -spot_img

Latest Posts

error: Content is protected !!