ವಿಜಯಸಾಕ್ಷಿ ಸುದ್ದಿ, ಗದಗ: ಡಾ. ಬಾಬಾಸಾಹೇಬ ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ಸರ್ಕಾರ ಕೊಡಮಾಡುವ 2025ರ ಸಾಲಿನ ಡಾ. ಬಿ.ಆರ್. ಅಂಬೇಡ್ಕರ ರಾಜ್ಯ ಮಟ್ಟದ ಪ್ರಶಸ್ತಿಗೆ ಹೋರಾಟಗಾರರಾದ ಎಫ್.ಎಚ್. ಜಕ್ಕಪ್ಪನವರ ಭಾಜನರಾದ ನಿಮಿತ್ತ ಗದಗ ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.
Advertisement
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಛಲವಾದಿ ಮಹಾಸಭಾದ ಗೌರವಾಧ್ಯಕ್ಷ ಬಸವರಾಜ ಕಡೇಮನಿ ಮಾತನಾಡುತ್ತ, ಎಫ್.ಎಚ್. ಜಕ್ಕಪ್ಪನವರ ಅವರು ವಿಧಾನಸಭೆ ಅಥವಾ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಬಂದರೆ ದಲಿತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಆನಂದ ಶಿಂಗಾಡಿ, ಶರೀಫ್ ಬಿಳೆಯಲಿ, ಮಂಜುನಾಥ ಗೊಂದಿಯವರ, ಶಿಕ್ಷಕರಾದ ರಾಜೇಶ ಚೌದ್ರಿ, ಮಲ್ಲೇಶ್ ಹೊಸಮನಿ, ಮುತ್ತು ಬಿಳೆಯಲಿ ಉಪಸ್ಥಿತರಿದ್ದರು.