ಬೆಂಗಳೂರು:- ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಸೈಬರ್ ಖದೀಮರು ಬೆಂಗಳೂರು ಕಮಿಷನರ್ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿ ಜನಸಾಮಾನ್ಯರಿಗೆ ರಿಕ್ವೆಸ್ಟ್ ಕಳಿಸುತ್ತಿದ್ದಾರೆ.
Advertisement
ಈ ಮೂಲಕ ಸೈಬರ್ ಖದೀಮರು ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ನಕಲಿ ಖಾತೆ ತೆರಿದ್ದಾರೆ. ಹಿಂದಿ ಭಾಷೆಯಲ್ಲಿ ಅಕೌಂಟ್ ಓಪನ್ ಮಾಡಿರುವ ಖದೀಮರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿದೆ.
ಇನ್ನೂ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳಂತೆ ನಟಿಸಿ ನಿಮ್ಮನ್ನು ಯಾಮಾರಿಸಬಹುದು. ಹಾಗಾಗಿ ಎಚ್ಚರವಾಗಿರುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಹೆಚ್ಚುತ್ತಿರುವ ಸೈಬರ್ ಅಪರಾಧದ ಬಗ್ಗೆ ಕಿವಿಮಾತು ಹೇಳಿದ್ದರು. ಆದರೆ ಇದೀಗ ಸೈಬರ್ ಖದೀಮರು ಅವರನ್ನು ಬಿಟ್ಟಿಲ್ಲ. ಏನೇ ಆಗಲಿ ಜನತೆ ಜಾಗರೂಕತೆಯಿಂದ ಇರಬೇಕಾಗಿದೆ.