ಬೆಂಗಳೂರು: ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಈ ಗ್ಯಾಂಗ್ ಈಗಾಗಲೇ ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟಗಳಲ್ಲಿ ಎಂಟು ಮಂದಿಯಿಂದ ಒಟ್ಟು 65 ಲಕ್ಷ ರೂ. ವಂಚನೆ ಮಾಡಿದ್ದಾಗಿ ವಿಚಾರಣೆಯಲ್ಲಿ ಬಹಿರಂಗವಾಗಿದೆ. ರಾಜೇಶ್ ಹಾಗೂ ಆತನ ಮೂವರು ಸಂಗಡಿಗರು ಸೇರಿ ನಾಲ್ವರು ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರು ಹೊರವಲಯವೇ ಇವರ ಟಾರ್ಗೆಟ್ ಪ್ರದೇಶವಾಗಿದ್ದು, ತಾಲ್ಲೂಕು ಕಚೇರಿ, ಹೋಟೆಲ್ಗಳ ಬಳಿ ತೆಲುಗು ಭಾಷೆ ಮಾತನಾಡುವವರನ್ನೇ ಗುರಿಯಾಗಿರಿಸಿಕೊಂಡಿದ್ದರು. ಆತ್ಮೀಯ ಪರಿಚಿತರಂತೆ ಬಿಲ್ಡಪ್ ಕೊಟ್ಟು ಬ್ರೈನ್ ವಾಶ್ ಮಾಡುತ್ತಿದ್ದ ಈ ಗ್ಯಾಂಗ್, ಕೇರಳದ ಒಂದು ಜಾಗದಲ್ಲಿ ಭೂಮಿ ಕೆಲಸ ಮಾಡುವಾಗ ಚಿನ್ನದ ಹಾರ ಸಿಕ್ಕಿದೆ. ಅದು ರಾಜಮಹಾರಾಜರ ಕಾಲದ ಚಿನ್ನದ ಹಾರ, ಈಗಿನ ಚಿನ್ನದ ರೇಟಿಗಿಂತ ಹೆಚ್ಚು ಎಂದು ಹೇಳುತ್ತಿದ್ದರು.
ಹೀಗೆ ವ್ಯಕ್ತಿಗಳನ್ನ ಬ್ರೈನ್ ವಾಶ್ ಮಾಡಿ ಮೊಬೈಲ್ ನಲ್ಲಿ ನಕಲಿ ಚಿನ್ನದ ಹಾರವನ್ನು ತೋರಿಸುತ್ತಿದ್ದರು. ನಂಬಿಕೆ ಬರಲಿ ಅಂತ ಎರಡು ಚಿನ್ನದ ಅಸಲಿ ಗುಂಡುಗಳನ್ನ ತೋರಿಸಿ ಇದು ಸರದ ತುದಿಯ ಗುಂಡುಗಳು ಎಂದು ನಂಬಿಕೆ ಹುಟ್ಟಿಸುತ್ತಿದ್ದರು.
ಎಂಟು ಕೆಜಿ ಚಿನ್ನದ ಹಾರವನ್ನು ಕಡಿಮೆ ಬೆಲೆಗೆ ಕೊಡ್ತೇವೆಂದು ಯಾಮಾರಿಸಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದರು. ಎಲ್ಲಾ ಮೊಬೈಲ್ ನಲ್ಲೇ ತೋರಿಸಿ ವಿಡಿಯೋ ಕಾಲ್ ಮೂಲಕ ಜಾಗ ಫಿಕ್ಸ್ ಮಾಡುತ್ತಿದ್ದ ಈ ಗ್ಯಾಂಗ್ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್ ಆಗುತ್ತಿದ್ದರೆಂದು ತಿಳಿದುಬಂದಿದೆ. ಮನೆಗೆ ಹೋಗಿ ಚಿನ್ನವನ್ನು ಪರಿಶೀಲಿಸಿದ್ದ ವ್ಯಕ್ತಿಗಳಿಗೆ ತಾವು ಮೋಸ ಹೋದ ವಿಷಯ ಗೊತ್ತಾಗಿ ಹೊಸಕೋಟೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಸದ್ಯ ಪೊಲೀಸ್ರಿಂದ ಪ್ರಮುಖ ಆರೋಪಿ ರಾಜೇಶ್ ಎಂಬಾತ ಸೇರಿ ನಾಲ್ವರ ಬಂಧಿಸಲಾಗಿದೆ



