HomeKarnataka Newsಪೂಜೆ ನೆಪದಲ್ಲಿ 43 ಗ್ರಾಂ ಚಿನ್ನಾಭರಣ, ₹1.30 ಲಕ್ಷ ನಗದು ದೋಚಿದ ನಕಲಿ ಸ್ವಾಮೀಜಿ!

ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನಾಭರಣ, ₹1.30 ಲಕ್ಷ ನಗದು ದೋಚಿದ ನಕಲಿ ಸ್ವಾಮೀಜಿ!

For Dai;y Updates Join Our whatsapp Group

ನೆಲಮಂಗಲ: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯಿಂದ 43 ಗ್ರಾಂ ಚಿನ್ನಾಭರಣ ಹಾಗೂ ₹1.30 ಲಕ್ಷ ನಗದು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಗಲಗುಂಟೆಯಲ್ಲಿ ನಡೆದಿದೆ.

ಗೀತಾ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನಿತಿನಿ ಅಲಿಯಾಸ್ ಶಿವಕಾಳಿ ಸ್ವಾಮೀಜಿ ವಿರುದ್ಧ ಆರೋಪ ಕೇಳಿಬಂದಿದೆ. ಗೀತಾ ಅವರ ಎರಡನೇ ಮಗಳ ದಾಂಪತ್ಯ ಜೀವನದಲ್ಲಿ ಆಗಾಗ ಕಲಹ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಪರಿಚಯಸ್ಥರ ಮೂಲಕ ಶಿವಕಾಳಿ ಸ್ವಾಮೀಜಿಯನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ.

ಪೂಜೆ ವೇಳೆ ಅಳಿಯನಿಗೆ ಸಾವಿನ ಗಂಡಾಂತರವಿದೆ ಎಂದು ಹೇಳಿದ್ದ ಸ್ವಾಮೀಜಿ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಶೇಷ ಪೂಜೆ ನಡೆಸಬೇಕು ಎಂದು ಸೂಚಿಸಿದ್ದ. ಅಲ್ಲದೆ ಪೂಜೆಗೆ ಚಿನ್ನಾಭರಣ ಹಾಗೂ ನಗದು ಇಡಲು ಹೇಳಿದ್ದಾನೆ.

ಸ್ವಾಮೀಜಿಯ ಮಾತನ್ನು ನಂಬಿದ ಗೀತಾ, 43 ಗ್ರಾಂ ಚಿನ್ನಾಭರಣ ಹಾಗೂ ₹1.30 ಲಕ್ಷ ನಗದನ್ನು ಪೂಜೆಗಾಗಿ ಇಟ್ಟಿದ್ದರು. ಬಳಿಕ ಬೂದಿ ಎರಚಿ ಬೆನ್ನಿಗೆ ಹೊಡೆದ ಪರಿಣಾಮ ಮಹಿಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವೇಳೆ ಚಿನ್ನಾಭರಣ ಹಾಗೂ ನಗದನ್ನು ದೋಚಿಕೊಂಡು ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img