HomeKarnataka Newsಮುಂಡರಗಿ ತಾಲೂಕಿನಲ್ಲಿ ಮನಕಲಕುವ ಘಟನೆ: ಮೂವರು ಕಂದಮ್ಮಗಳ ನದಿಗೆ ಎಸೆದು ವ್ಯಕ್ತಿ ಆತ್ಮಹತ್ಯೆ!

ಮುಂಡರಗಿ ತಾಲೂಕಿನಲ್ಲಿ ಮನಕಲಕುವ ಘಟನೆ: ಮೂವರು ಕಂದಮ್ಮಗಳ ನದಿಗೆ ಎಸೆದು ವ್ಯಕ್ತಿ ಆತ್ಮಹತ್ಯೆ!

For Dai;y Updates Join Our whatsapp Group

Spread the love

ಗದಗ:- ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಟ್ಟಾದ ವ್ಯಕ್ತಿಯೋರ್ವನು ಮೂವರು ಕಂದಮ್ಮಗಳನ್ನು ನದಿಗೆ ಎಸೆದು ತಾನೂ ಹಾರಿ ‌ಆತ್ಮಹತ್ಯೆ‌ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ಜರುಗಿದೆ.

ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬಳಿಯ ತುಂಗಭದ್ರಾ ನದಿಯಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಟಿಪ್ಪರ್ ಡ್ರೈವರ್ ಆಗಿದ್ದ ಮಂಜುನಾಥ್ ಅರಕೇರಿ (41) ತನ್ನ ಅಳಿಯನ ಮಗ ಮೂರು ವರ್ಷದ ವೇದಾಂತ, 4 ವರ್ಷದ ಪವನ, 6 ವರ್ಷದ ಧನ್ಯಾ ಎಂಬುವವರನ್ನು ನದಿಗೆ ಎಸೆದಿದ್ದಾನೆ ಎನ್ನಲಾಗಿದೆ.

ಮಂಜುನಾಥ ಅರಕೇರಿ ಎಂಬಾತ ಮೊದಲು ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ಸಹ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವರು ಮುಂಡರಗಿ ತಾಲೂಕಿನ ಮಕ್ತುಂಪೂರ ಗ್ರಾಮದ ನಿವಾಸಿ ಎನ್ನಲಾಗಿದೆ.

ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!