ಚಿಕ್ಕೋಡಿ:- ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆಯೊಬ್ಬರು 3 ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿದ ಘಟನೆ ಜರುಗಿದೆ.
Advertisement
ಮೂವರಲ್ಲಿ 1 ಮಗು ಪಾರಾಗಿದೆ. ತಾಯಿ ಶಾರದಾ ಡಾಲೆ(32) ಮಕ್ಕಳಾದ ಅಮೃತಾ(14), ಆದರ್ಶ(8) ಮೃತರು. ಅನುಕ್ಷಾ ಡಾಲೆ ಬದುಕುಳಿದಿದ್ದು, ರಾಯಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಅಶೋಕ ಡಾಲೆ(45) ಪ್ರತಿ ನಿತ್ಯ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ.
ಇದರಿಂದ ಮನನೊಂದ ಶಾರದಾ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾರೆ. 1 ಮಗುವನ್ನು ಕೂಡಲೇ ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ತಿಳಿಸಿದ್ದಾರೆ. ಅಶೋಕ ಡಾಲೆಯನ್ನು ಕುಡಚಿ ಪೊಲೀಸರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.