ಸುಪ್ರೀಂ ಕೋರ್ಟ್‌ ನಲ್ಲಿ ದರ್ಶನ್‌ ಪರ ಖ್ಯಾತ ವಕೀಲ ಕಪಿಲ್‌ ಸಿಬಲ್‌ ವಾದ?

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಸುಮಾರು ಏಳು ತಿಂಗಳ ಕಾಲ ಜೈಲಿನಲ್ಲಿದ್ದ ನಟ ದರ್ಶನ್‌ ಸದ್ಯ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದ್ರೆ ಇದು ದರ್ಶನ್‌ ಗೆ ಸಂಪೂರ್ಣ ರಿಲೀಫ್‌ ಅಲ್ಲ. ಹೀಗಾಗಿ ಸುಪ್ರೀಂ ಕೋರ್ಟ್‌ ನಲ್ಲಿ ತಮ್ಮ ಪರ ವಾದ ಮಂಡನೆ ಮಾಡಲು ದರ್ಶನ್‌ ಖ್ಯಾತ ವಕೀಲರನ್ನೇ ಹಿಡಿದಿದ್ದಾರೆ ಎನ್ನಲಾಗುತ್ತಿದೆ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆಸಂಬಂಧಿಸಿದಂತೆ ದರ್ಶನ್‌ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಮಾರ್ಚ್‌ನಲ್ಲಿ ನಡೆಯಲಿದೆ. ಹೀಗಾಗಿ ಹೇಗಾದರು ಮಾಡಿ ಪ್ರಕರಣದಿಂದ ಹೊರ ಬರಬೇಕು ಎಂದು ನಿರ್ಧರಿಸಿರುವ ದರ್ಶನ್‌ ಖ್ಯಾತ ವಕೀಲ ಕಪಿಲ್‌ ಸಿಬಲ್‌ ಅವರನ್ನು ಸಂಪರ್ಕಿಸಿದ್ದಾರೆ.

ಈಗಾಗಲೇ ಕಪಿಲ್ ಸಿಬಲ್‌ರನ್ನು ಭೇಟಿಯಾಗಿ ಹೈಕೋರ್ಟ್‌ನ ವಾದ ಪ್ರತಿವಾದ, ಕೇಸ್ ಹಿಸ್ಟರಿಯನ್ನು ನೀಡಲಾಗಿದೆ. ಕೋರ್ಟ್‌ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ. ದರ್ಶನ್‌ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್‌ ಸಿಬಲ್‌ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ದರ್ಶನ್‌ ಪರ ಹಿರಿಯ ವಕೀಲ ಸಿವಿ ನಾಗೇಶ್‌ ವಾದ ಮಂಡಿಸಿದ್ದರು.


Spread the love

LEAVE A REPLY

Please enter your comment!
Please enter your name here