ಬರಗಾಲ ಹಾಗೂ ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣು

0
Spread the love

ವಿಜಯಪುರ: ಬರಗಾಲ ಹಾಗೂ ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ನಂದಗೇರಿ ಗ್ರಾಮದಲ್ಲಿ ನಡೆದಿದೆ.

Advertisement

ಸಿದ್ದನಗೌಡ ಬಿರಾದಾರ (32) ಆತ್ಮಹತ್ಯಗೆ ಶರಣಾದ ರೈತನಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಸಿದ್ದನಗೌಡ ಮಳೆಯಾಗದೇ ಬರದಿಂದ ಬೆಳೆ ಬಂದಿಲ್ಲವೆಂದು ನೊಂದಿದ್ದರು.

ಅದಲ್ಲದೆ ಖಾಸಗಿ ವ್ಯಕ್ತಿಗಳ ಬಳಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಫಸಲು ಬಾರದ ಕಾರಣ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here