ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಸವಾನಾಳು ಗ್ರಾಮದಲ್ಲಿ ಹಾವು ಕಡಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
Advertisement
ರತ್ನಮ್ಮ (45) ಮೃತ ದುರ್ದೈವಿ. ರತ್ನಮ್ಮ ಹೊಲದಲ್ಲಿ ಮೆಕ್ಕೆಜೋಳದ ಕಟಾವು ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಹಾವೊಂದು ರತ್ನಮ್ಮರ ಕಾಲಿಗೆ ಕಚ್ಚಿದೆ.
ಕೂಡಲೇ ಅವರನ್ನು ಅಲ್ಲಿದ್ದವರು ಕೊಟ್ಟೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನೆ ಮಾಡಲು ಮುಂದಾಗಿದ್ದಾರೆ. ಆದರೆ ಆದಾಗಲೇ ಹಾವಿನ ವಿಷ ಮೈಗೆ ಆವರಿಸಿದ್ದರಿಂದ ಮಾರ್ಗಮಧ್ಯೆಯೇ ಉಸಿರು ಚೆಲ್ಲಿದ್ದಾರೆ.
ಕೊಟ್ಟೂರು ತಾಲೂಕು ಆರೋಗ್ಯಾಧಿಕಾರಿ ಡಾ. ಬಸವೇಶ್ವರ ಅವರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.