ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸಿ ರೈತರ ಆಕ್ರೋಶ

0
Spread the love

ಧಾರವಾಡ: ಕಳೆದ ಮೂರು ವರ್ಷಗಳಿಂದ ರೈತರು ಅತಿವೃಷ್ಠಿ ಅನಾವೃಷ್ಠಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಧಾರವಾಡದಲ್ಲಿ ಬೀದಿಗೆ ಇಳಿದು ಅನ್ನದಾತರ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಕಿಸಾನ್ ಸಂಘ-ಕರ್ನಾಟ ಪ್ರದೇಶ ನೇತೃತ್ವದಲ್ಲಿನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಕಳೆದ ಮೂರು ವರ್ಷಗಳಿಂದ ರೈತರು ಅತಿವೃಷ್ಠಿ ಅನಾವೃಷ್ಠಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬರಗಾಲದಿಂದ ರೈತರು ಸೇರಿ ಜಾನುವಾರುಗಳು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ರೈತರ ಸಂಕಷ್ಟ ನೋಡುತ್ತಿಲ್ಲ, ಬರಗಾಲದ ಸಮಯದಲ್ಲಿ ಬೋರವೆಲ್ ರೈತರಿಗೆ ಸಮರ್ಪಕ ವಿದ್ಯುತ್ ನೀಡುತ್ತಿಲ್ಲ ಹೀಗೆ ಆದರೆ ರೈತರು ಹೇಗೆ ಬೆಳೆ ತೆಗೆಯಬೇಕು..?

ಕೃಷಿ ಸಚಿವರು ಬೆಂಗಳೂರು ಸಮುದಾಯಗಳ‌ ಕಾರ್ಯಕ್ರಮ ಬಿಟ್ಟರೆ ರೈತರ ಸಂಕಷ್ಟ ಆಲಿಸುತ್ತಿಲ್ಲ. ರಾಜ್ಯದಲ್ಲಿ ರೈತರ ಸಂಕಷ್ಟ ಕೇಳುವವರು ಯಾರು ಇಲ್ಲ, ಈ ಕೂಡಲೇ ರಾಜ್ಯ ಸರ್ಕಾರ ವಿದ್ಯುತ್ ಸಮಸ್ಯೆ ಪರಿಹಾರ ಮಾಡಬೇಕು, ಬರಗಾಲ ಪರಿಹಾರ ಎಕರೆಗೆ 20ಸಾವಿರ ನೀಡಬೇಕು. ಇವುಗಳ ಜೊತೆಗೆ ನಮ್ಮ ರೈತ ಸಮುದಾಯದ ವಿವಿಧ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕು. ಇಲ್ಲವಾದರೆ ಉಗ್ರ ಹೋರಾಟದ ಕಡೆ ಯೋಚನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


Spread the love

LEAVE A REPLY

Please enter your comment!
Please enter your name here