HomeGadag Newsವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘದ ತೀವ್ರ ವಿರೋಧ

ವಿದ್ಯುತ್ ಖಾಸಗೀಕರಣಕ್ಕೆ ರೈತ ಸಂಘದ ತೀವ್ರ ವಿರೋಧ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಗದಗ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಶಂಕರಗೌಡ ಜಾಯನಗೌಡ್ರ, ವಿದ್ಯುತ್ ಖಾಸಗೀಕರಣದಿಂದ ರೈತರು, ಗೃಹ ಬಳಕೆದಾರರು ಹಾಗೂ ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದೇಶದ 26 ಕೋಟಿ ವಿದ್ಯುತ್ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಹೆಸರಿನಲ್ಲಿ ಪ್ರತಿ ಮೀಟರ್‌ಗೆ ಸುಮಾರು ₹8 ಸಾವಿರ ವೆಚ್ಚವಾಗಲಿದ್ದು, ಇದರಿಂದ ಲಕ್ಷಾಂತರ ಕೋಟಿ ರೂಪಾಯಿ ಖಾಸಗಿ ಕಂಪನಿಗಳ ಪಾಲಾಗಲಿದೆ ಎಂದು ಆರೋಪಿಸಿದರು. ವಿದ್ಯುತ್ ದರ ಏರಿಕೆ, ಸಬ್ಸಿಡಿ ಕಡಿತ ಹಾಗೂ ರೈತರ ಉಚಿತ ವಿದ್ಯುತ್ ಯೋಜನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಖಾಸಗೀಕರಣ ಜಾರಿಯಾದರೆ ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ, ಗೃಹಜ್ಯೋತಿ, ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಜನಪರ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಕೈಮಗ್ಗ ನೇಕಾರರು, ತೋಟಗಾರಿಕೆ ಬೆಳೆಗಾರರು, ಸಣ್ಣ ಕೈಗಾರಿಕೆಗಳು ಹಾಗೂ ಹೆಸ್ಕಾಂ ಕಾರ್ಮಿಕರ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಟಾಟಾ ಪವರ್ ಕಂಪನಿಗೆ ಪರವಾನಗಿ ನೀಡಬಾರದು. ಒಂದು ವೇಳೆ ಖಾಸಗೀಕರಣಕ್ಕೆ ಮುಂದಾದರೆ ರಾಜ್ಯಾದ್ಯಂತ ಬಂದ್, ಬಾರ್‌ಕೋಲ್ ಚಳವಳಿ ಹಾಗೂ ಜೈಲ್ ಭರೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬಸವರಾಜ ಮರಾಠ, ಎಂ.ಎಸ್. ಗುತ್ತೇದಾರ, ಮಹದೇವ ವೇರ್ಣೇಕರ, ಗೂಳಪ್ಪ ಗುಡದೂರ, ವಿರೇಶ ಮಾಳೊತ್ತರ, ಟಿ.ವಿ. ಕರವಿ, ಶಂಕರಗೌಡ ಪಾಟೀಲ, ಐ.ಬಿ. ಗದಗಿನ, ಫಕ್ಕೀರೇಶ ಬೆಳ್ಳಟ್ಟಿ, ವಿನಾಯಕ ಅಚಲಕರ, ವಿರೇಶ ಅಚಲಕರ, ಆದೇಶ ಹುಲಗೂರ, ಸಂಜಯ ಚಳಗೇರಿ, ಅನಿಲ ಕರಣೆ, ಹಸನಸಾಬ ದೊಡ್ಡಮನಿ, ಬಸನಗೌಡ ಮಲ್ಲನಗೌಡರ, ವಿರೇಶ ಕರವೀರಮಠ, ಜಗದೀಶ ಅಂಗಡಿ, ಅಂದಪ್ಪ ಅಂಗಡಿ ಸೇರಿದಂತೆ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

“ವಿದ್ಯುತ್ ಖಾಸಗೀಕರಣ ಜಾರಿಯಾದರೆ ರೈತರ ಉಚಿತ ವಿದ್ಯುತ್, ಜನಪರ ಯೋಜನೆಗಳು ಹಾಗೂ ಸಬ್ಸಿಡಿಗಳಿಗೆ ಕತ್ತರಿ ಬೀಳಲಿದೆ. ರೈತ ವಿರೋಧಿ ಈ ಕ್ರಮವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ.”

— ಶಂಕರಗೌಡ ಜಾಯನಗೌಡ್ರ, ಜಿಲ್ಲಾ ಅಧ್ಯಕ್ಷರು, ರೈತ ಸಂಘ ಮತ್ತು ಹಸಿರು ಸೇನೆ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!