ಕಾಂಗ್ರೆಸ್ ಸರ್ಕಾರದಿಂದ ರೈತರು ಬೀದಿಗೆ ಬಂದಿದ್ದಾರೆ: ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ- ವಿಜಯೇಂದ್ರ!

0
Spread the love

ಬೆಂಗಳೂರು:- ಕಾಂಗ್ರೆಸ್ ಸರ್ಕಾರದಿಂದ ರೈತರು ಬೀದಿಗೆ ಬಂದಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

Advertisement

ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ ಅಭಾವ ವಿರುದ್ಧ ಸೋಮವಾರ ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಜಯೇಂದ್ರ, ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡ್ತಿದ್ರು, ಅದಕ್ಕೆ ಅನುದಾನವೂ ಇಡ್ತಿದ್ರು. ಈ ಸರ್ಕಾರ ಕಾಪು ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ದಾಸ್ತಾನು ಅನುದಾನ 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ಹೊರಹಾಕಿದ್ರು.

ಮುಂಗಾರು ಶೀಘ್ರ ಆರಂಭವಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಮುಂಚೆಯೇ ಸಿದ್ಧತೆ ಮಾಡಿಕೊಂಡಿಲ್ಲ, ಮುಂಚೆಯೇ ಕೇಂದ್ರಕ್ಕೆ ಪತ್ರ ಬರೆಯಬೇಕಿತ್ತು. ಈಗ ಪತ್ರ ಬರೆಯೋದಲ್ಲ. ರೈತರನ್ನು ಈ ಸರ್ಕಾರ ಬೀದಿಗೆ ತಂದಿದೆ ಎಂದು ವಿಜಯೇಂದ್ರ ಕಿಡಿ ಕಾರಿದರು. ಕೇಂದ್ರದಿಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ, ಏನಾಯ್ತು? ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ. ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತಗೋಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ ಎಂದರು.


Spread the love

LEAVE A REPLY

Please enter your comment!
Please enter your name here