ವಿಜಯಸಾಕ್ಷಿ ಸುದ್ದಿ, ಮುಳಗುಂದ: ರೈತರು ಸಹಕಾರಿ ಸಂಘಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರಗಳು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ನುಡಿದರು.
ಅವರು ಪಟ್ಟಣ ಸಮೀಪದ ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.
ರೈತರು ತಾವು ಬೆಳೆದ ಬೆಳೆಗಳಿಗೆ ಎಂದು ತಾನೇ ಬೆಲೆಯನ್ನು ನಿರ್ಧರಿಸುತ್ತಾನೋ ಅಂದು ರೈತರ ಅಭಿವೃದ್ಧಿ ಹೊಂದಲು ಸಾಧ್ಯ. ಅಂದು ಸಿದ್ದನಗೌಡ ಪಾಟೀಲರು ರೈತರ ಆರ್ಥಿಕ ಅಭಿವೃದ್ಧಿಗಾಗಿ ಸಹಕಾರಿ ಸಂಘಗಳನ್ನು ಸ್ಥಾಪಿಸುವ ಮೂಲಕ ರೈತರ ಏಳಿಗಾಗಿ ನಿಸ್ವಾರ್ಥ ಸೇವೆಗೈದು ನಾಡಿಗೆ ಬೆಳಕು ನೀಡಿದವರು. ಇದರ ಪ್ರತಿಫಲವಾಗಿ ಮಲ್ಲಪ್ಪ ಕಲಗುಡಿ ಅವರ ಅಧ್ಯಕ್ಷತೆಯಲ್ಲಿ ಸಹಕಾರಿ ಸಂಘದ ನಿಸ್ವಾರ್ಥ ಸೇವೆ, ಸತತ ಪ್ರಯತ್ನ, ರೈತರ ಬಗ್ಗೆ ವಿಶೇಷ ಕಾಳಜಿಯ ಫಲವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಎಲ್ಲಾ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ರೈತರನ್ನು ಹಾಗೂ ಸಂಘವನ್ನು ಆರ್ಥಿಕವಾಗಿ ಸದೃಢವಾಗಿಸಿದ ಕಾರ್ಯ ಶ್ಲಾಘನೀಯ ಎಂದರು.
ಅಧ್ಯಕ್ಷತೆಯನ್ನು ಸೊರಟೂರ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಂ.ಎಫ್. ಕಲಗುಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನರಗುಂದ ಮಾಜಿ ಶಾಸಕ ಬಿ.ಆರ್. ಯಾವಗಲ್ಲ, ಮಾಜಿ ಶಾಸಕ ಡಿ.ಆರ್. ಪಾಟೀಲ್, ಗ್ರಾ.ಪಂ ಅಧ್ಯಕ್ಷರಾದ ಚಂದ್ರಮ್ಮ ಓಂಕಾರಿ, ಸೊರಟೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಪಿ.ವಾಯ್. ಮಲ್ಲಾರಿ, ನಾಗಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಿ.ಆರ್. ದೇವರೆಡ್ಡಿ, ಜಿ.ಪಂ ಸ್ವಚ್ಛ ಭಾರತ ಮಿಷನ್ ಸಮಾಲೋಚಕ ಎಚ್.ಎಫ್. ಕುಸಣ್ಣವರ, ಅಪ್ಪಣ್ಣಾ ಇನಾಮತಿ, ಸಿ.ಬಿ. ದೊಡ್ಡಗೌಡರ, ವಾಸಣ್ಣಾ ಕುರಡಗಿ, ಶಿವಕುಮಾರಗೌಡ ಪಾಟೀಲ, ಜಿ.ಪಿ. ಪಾಟೀಲ, ಪರಶುರಾಮ ಹೂಗಾರ ಇದ್ದರು.
ಮಾಜಿ ಸಹಕಾರಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ರೈತರು ಆರ್ಥಿಕವಾಗಿ ಸದೃಢರಾಗಲು ಸಹಕಾರಿ ಸಂಘಗಳ ಸಹಾಯ-ಸಹಕಾರವನ್ನು ಪಡೆದುಕೊಳ್ಳಬೇಕು. ರೈತರು ಸಕಾಲದಲ್ಲಿ ಸಾಲಗಳನ್ನು ಮರುಪಾವತಿ ಮಾಡಿದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಸಹ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳ ಅಳಿವು-ಉಳಿವು ಸಂಘದ ಸಿಬ್ಬಂದಿಗಳ ಕೈಯಲ್ಲಿದೆ. ಆಡಳಿತ ಮಂಡಳಿ ಹಾಗೂ ರೈತರು, ಶೇರುದಾರರು ಸಂಘ-ಸAಸ್ಥೆಗಳ ಎಲ್ಲರೊಂದಿಗೂ ಸಹಕಾರಿ ಮನೋಭಾವನೆ ಬೆಳೆಸಿಕೊಂಡು ಸಾಗಬೇಕು ಎಂದರು.