HomeGadag Newsಬರದಿಂದ ರೈತರ ಸಂಕಷ್ಟ, ಸಭೆಯಲ್ಲಿ ರೀಲ್ಸ್ ನೋಡುತ್ತಾ ಅಧಿಕಾರಿಗಳ ಚಲ್ಲಾಟ! ಸಚಿವರ ವಾರ್ನಿಂಗ್‌ಗೂ ಡೋಂಟ್‌ ಕೇರ್‌?

ಬರದಿಂದ ರೈತರ ಸಂಕಷ್ಟ, ಸಭೆಯಲ್ಲಿ ರೀಲ್ಸ್ ನೋಡುತ್ತಾ ಅಧಿಕಾರಿಗಳ ಚಲ್ಲಾಟ! ಸಚಿವರ ವಾರ್ನಿಂಗ್‌ಗೂ ಡೋಂಟ್‌ ಕೇರ್‌?

For Dai;y Updates Join Our whatsapp Group

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಾಡಳಿತ ಕಚೇರಿಯಲ್ಲಿ ಬರ ಪರಿಸ್ಥಿತಿ ಕುರಿತು ನಡೆದ ಸಭೆಯಲ್ಲಿ ಕೆಲ ಅಧಿಕಾರಿಗಳ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಉಸ್ತುವಾರಿ ಸಚಿವ ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರು ಬರ ನಿರ್ವಹಣೆ ಕುರಿತು ಗಂಭೀರವಾಗಿ ಚರ್ಚೆ ನಡೆಸುತ್ತಿದ್ದರೆ, ಕೆಲ ಅಧಿಕಾರಿಗಳು ಮೊಬೈಲ್‌ನಲ್ಲಿ ರೀಲ್ಸ್ ವೀಕ್ಷಿಸುತ್ತಿದ್ದರು ಹಾಗೂ ಇನ್ನು ಕೆಲವರು ನಿದ್ದೆ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬರ ನಿರ್ವಹಣೆಯಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಎನ್ನಲಾಗಿದೆ.

ಆದರೆ ಸಚಿವರ ಸಭೆಯಲ್ಲೇ ಕೆಲ ಅಧಿಕಾರಿಗಳು ಮೊಬೈಲ್‌ನಲ್ಲಿ ತಲ್ಲೀನರಾಗಿದ್ದ ದೃಶ್ಯಗಳು ಕಂಡುಬಂದಿವೆ. ಕೆಲವರು ರೀಲ್ಸ್ ವೀಕ್ಷಿಸುತ್ತಿದ್ದರೆ, ಇನ್ನೂ ಕೆಲ ಅಧಿಕಾರಿಗಳು ಸಭೆಯ ವೇಳೆ ನಿದ್ದೆ ಮಾಡುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ರೈತರು ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ?

ಜಿಲ್ಲೆಯಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ, ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಅಧಿಕಾರಿಗಳು ಈ ರೀತಿ ನಿರ್ಲಕ್ಷ್ಯ ತೋರಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಇದೀಗ ಎದ್ದಿದೆ.

ಬರ ನಿರ್ವಹಣೆಯಲ್ಲಿನ ಲೋಪಗಳ ಬಗ್ಗೆ ಸಚಿವರು ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಸಚಿವರ ಎಚ್ಚರಿಕೆಯ ನಡುವೆಯೂ ಕೆಲ ಅಧಿಕಾರಿಗಳು ಸಭೆಯ ಗಂಭೀರತೆಯನ್ನು ಪರಿಗಣಿಸದೆ ಮೊಬೈಲ್ ಬಳಕೆ ಹಾಗೂ ನಿದ್ರೆಯಲ್ಲಿ ತೊಡಗಿದ್ದ ದೃಶ್ಯಗಳು ಚರ್ಚೆಗೆ ಗ್ರಾಸವಾಗಿವೆ.

ರೈತರ ಸಂಕಷ್ಟ ನಿವಾರಣೆ, ಕುಡಿಯುವ ನೀರು ಹಾಗೂ ಬರ ನಿರ್ವಹಣೆಯಂತಹ ಪ್ರಮುಖ ವಿಚಾರಗಳ ಕುರಿತು ಚರ್ಚಿಸಲು ನಡೆದ ಸಭೆಯಲ್ಲೇ ಅಧಿಕಾರಿಗಳ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img