ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ಸಾವು

0
Spread the love

ಶಿವಮೊಗ್ಗ: ಬೈಕ್​ ಹಾಗೂ ಟಿಪ್ಪರ್​ ನಡುವೆ ಭೀಕರ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಬಳಿ ನಡೆದಿದೆ. ಸಚಿನ್ (19) ಮೃತ ಬೈಕ್ ಸವಾರನಾಗಿದ್ದು, ಸಾಗರ ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ.

Advertisement

ಅಪಘಾತದಲ್ಲಿ ಕಟ್ಟಿನಕಾರು ಗ್ರಾಮದ ಬೈಕ್‌ ಸವಾರ ಸಚಿನ್ ತೀವ್ರವಾಗಿ ಗಾಯಗೊಂಡಿದ್ದ. ಜೊತೆಗೆ ಹಿಂಬದಿ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಆ ಕೂಡಲೇ ಸ್ಥಳೀಯರು ಸಚಿನ್​ನನ್ನು ಶಿವಮೊಗ್ಗ ಆಸ್ಪತ್ರೆ ರವಾನಿಸಿದ್ದಾರೆ. ಜೊತೆಗೆ ಮತ್ತೊಬ್ಬ ಸವಾರ ಸುಮಂತ್ ಕುಂದಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಚಿನ್ ಮೃತಪಟ್ಟಿದ್ದಾನೆ.


Spread the love

LEAVE A REPLY

Please enter your comment!
Please enter your name here