ಕಾರು-ಟಿಟಿ ವಾಹನದ ನಡುವೆ ಭೀಕರ ಅಪಘಾತ: ಕೇರಳ ಮೂಲದ ಇಬ್ಬರು ಸಾವು.! ಹಲವರಿಗೆ ಗಾಯ

0
Spread the love

ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಮೈಸೂರು ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪ ನಡೆದಿದೆ. ಶಾಷಿದ್ (30) ಹಾಗೂ ಮುಷ್ಕಾನ್ (19) ಮೃತ ದುರ್ಧೈವಿಗಳಾಗಿದ್ದು, ಶಾಜೀಯಾ ಎಂಬುವರಿಗೆ ತೀವ್ರ ಪೆಟ್ಟಾಗಿದ್ದು,

Advertisement

ಸ್ಥಿತಿ ಚಿಂತಾಜನಕವಾಗಿದೆ. ಟಿಟಿ ವಾಹನ ಚಾಲಕ ನಂಜನಗೂಡಿನ‌ ನಗರ್ಲೆ ಗ್ರಾಮದ ಸಾಗರ್ (32) ಎಂಬಾತನ ಕಾಲು ಮುರಿದಿದೆ. ಘಟನೆಯಲ್ಲಿ ಉಳಿದ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ನಂಜನಗೂಡಿನಿಂದ ಊಟಿಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ರಂಜಾನ್ ಪ್ರವಾಸಕ್ಕಾಗಿ ಮೈಸೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ ಒಂದೇ ಕುಟುಂಬದ 8 ಮಂದಿ ಮಕ್ಕಳೊಡನೆ ಹೋಗುತ್ತಿದ್ದರು. ಇದರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟಿಟಿ ವಾಹನದಲ್ಲಿ ತೆರಳುತ್ತಿದ್ದ ಚಾಲಕ ಸೇರಿ ಸುಮಾರು 5ರಿಂದ 6 ಮಂದಿಗೆ ಗಾಯಗೊಂಡಿದ್ದಾರೆ.

ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹ ಹಾಗೂ ಗಾಯಾಳುಗಳನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಬೇಗೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here