ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನೇ ಕೊಲೆಗೈದ ಮಾವ!

0
Spread the love

ನೆಲಮಂಗಲ:– ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ ಮಾಡಿರುವ ಘಟನೆ ಜರುಗಿದೆ.

Advertisement

ಕೊಲೆಯಾದ ಬಾಲಕನನ್ನು 14 ವರ್ಷದ ಅಮೋಘ ಕೀರ್ತಿ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ಬಾಲಕ ಅಮೋಘ ಕೀರ್ತಿ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಅಲ್ಲಿಗೆ ಹೋಗಲು ಕೂಡ ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here