HomeBengaluru Newsಒಂದೆಡೆ ಪ್ರವಾಹ ಭೀತಿ, ಮತ್ತೊಂದೆಡೆ ಬರದ ಆತಂಕ; ಮಳೆಗಾಗಿ ಕಾದು ಕುಳಿತ ಅನ್ನದಾತರು!

ಒಂದೆಡೆ ಪ್ರವಾಹ ಭೀತಿ, ಮತ್ತೊಂದೆಡೆ ಬರದ ಆತಂಕ; ಮಳೆಗಾಗಿ ಕಾದು ಕುಳಿತ ಅನ್ನದಾತರು!

For Dai;y Updates Join Our whatsapp Group

ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದರೆ, ಇನ್ನೂ ಹಲವು ಜಿಲ್ಲೆಗಳಲ್ಲಿ ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.

ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಕಾಡು ಪ್ರಾಣಿಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ನಿರ್ಮಾಣವಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ನೀರಿನ ಅಭಾವದ ಪರಿಸ್ಥಿತಿ ಎದುರಾಗಿದೆ. ಕಳೆದ ವರ್ಷವೂ ಇದೇ ಸಮಸ್ಯೆ ಎದುರಾಗಿದ್ದರಿಂದ ಅಧಿಕಾರಿಗಳು ಕಾಡು ಪ್ರಾಣಿಗಳಿಗಾಗಿ ಸಣ್ಣ ಟ್ಯಾಂಕ್‌ಗಳನ್ನು ನಿರ್ಮಿಸಿದ್ದರು. ಆದರೆ ಇದೀಗ ಆ ಟ್ಯಾಂಕ್‌ಗಳಲ್ಲಿನ ನೀರಿನ ಪ್ರಮಾಣವೂ ಕಡಿಮೆಯಾಗುತ್ತಿದೆ.

ಮೇ ತಿಂಗಳಲ್ಲಿ ಸುರಿದ ಅಲ್ಪ ಮಳೆಯಿಂದ ಕೆಲವು ಕೆರೆಗಳು ಭಾಗಶಃ ತುಂಬಿದ್ದರೂ, ಹಲವು ಕೆರೆಗಳು ಸಂಪೂರ್ಣ ಖಾಲಿಯಾಗಿವೆ. ಮಳೆ ಮುಂದುವರಿಯದಿದ್ದರೆ ವನ್ಯಜೀವಿಗಳಿಗೂ ನೀರಿನ ಸಮಸ್ಯೆ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಇದೆ.

ಚಿತ್ರದುರ್ಗದಲ್ಲಿ ಬೆಳೆಗಳಿಗೆ ಬರದ ಹೊಡೆತ:

ಕೋಟೆನಾಡು ಚಿತ್ರದುರ್ಗದಲ್ಲೂ ಮಳೆಯ ಕೊರತೆ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಸೂರ್ಯಕಾಂತಿ ಬಿತ್ತನೆಗೂ ಮುನ್ನ ಉತ್ತಮ ಮಳೆಯಾಗಿದ್ದರೂ, ಕಳೆದ ಎರಡು ತಿಂಗಳಿಂದ ಮಳೆ ಬಾರದ ಪರಿಣಾಮ ತೊಗರಿ ಮತ್ತು ಮೆಕ್ಕೆಜೋಳ ಬೆಳೆಗಳು ಒಣಗುತ್ತಿವೆ.

ಚಿತ್ರದುರ್ಗ ತಾಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ರೈತರು ಎಕರೆಗೆ 50ರಿಂದ 60 ಸಾವಿರ ರೂ. ಖರ್ಚು ಮಾಡಿ ಬೆಳೆ ಬೆಳೆದಿದ್ದು, ಫಸಲು ಬರುವ ಮುನ್ನವೇ ಬೆಳೆಗಳು ಹಾಳಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ.

ವಿಜಯಪುರದಲ್ಲೂ ರೈತರ ಸಂಕಷ್ಟ:

ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಜೂನ್ ಮೊದಲ ವಾರದಲ್ಲಿ ಅಲ್ಪ ಮಳೆಯಾದ ಹಿನ್ನೆಲೆಯಲ್ಲಿ ಶೇ.20ರಷ್ಟು ರೈತರು ಬಿತ್ತನೆ ಮಾಡಿದ್ದಾರೆ. ಉಳಿದ ರೈತರು ಮಳೆಗಾಗಿ ಕಾಯುತ್ತಿದ್ದು, ಬಿತ್ತನೆ ಬೀಜ ಹಾಗೂ ಗೊಬ್ಬರಕ್ಕಾಗಿ ಮಾಡಿರುವ ಸಾಲದ ಚಿಂತೆಯಲ್ಲಿ ಸಿಲುಕಿದ್ದಾರೆ.

ಜುಲೈ ಬಂದರೂ ನಿರೀಕ್ಷಿತ ಮಳೆ ಬಾರದ ಕಾರಣ ರೈತರು ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಮಳೆ ಕಡಿಮೆಯಾದರೂ ಸಮಸ್ಯೆ ಮುಂದುವರಿಕೆ:

ಇತ್ತ ಕೊಡಗು ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಭಾರಿ ಮಳೆಗೆ ಉಂಟಾದ ಸಮಸ್ಯೆಗಳು ಇನ್ನೂ ಮುಂದುವರಿದಿವೆ. ಭಾಗಮಂಡಲ ಹಾಗೂ ಚೆಟ್ಟಿಮಾನಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಿನಲ್ಲಿ ದಿನ ಕಳೆಯುವಂತಾಗಿದೆ.

ಭಾರಿ ಗಾಳಿ ಮಳೆಯಿಂದ 16ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಮಳೆಯ ಚಿತ್ರಣ ವಿಭಿನ್ನವಾಗಿದೆ. ಕೆಲವೆಡೆ ಮಳೆ ಅಬ್ಬರಿಸುತ್ತಿದ್ದರೆ, ಮತ್ತೊಂದೆಡೆ ರೈತರು ಹಾಗೂ ವನ್ಯಜೀವಿಗಳು ನೀರಿಗಾಗಿ ಮಳೆರಾಯನ ನಿರೀಕ್ಷೆಯಲ್ಲಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img