ಭಂಡ ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯ: ಬಿವೈ ವಿಜಯೇಂದ್ರ!

0
Spread the love

ಬೆಂಗಳೂರು:- ಭಂಡ ಮುಖ್ಯಮಂತ್ರಿಗಳ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

Advertisement

ನಗರದ ಫ್ರೀಡಂ ಪಾರ್ಕಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಭಂಡ ಸರ್ಕಾರ ಹಾಗೂ ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿಯಿಲ್ಲ. ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ. ಇದು ಪ್ರಾರಂಭವಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ. ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್‌ಗೆ ಮೊನ್ನೆ ರಾತ್ರಿ 2 ರೂ. ಹೆಚ್ಚಿಸಿದ ದುಷ್ಟರಿವರು. ಇದು ಅಧಿಕಾರದ ಮದ ಎಂದು ಖಂಡಿಸಿದರು.

ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ತಾಯಂದಿರೂ ಪಾಲ್ಗೊಂಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ನಮ್ಮ ಹೋರಾಟದ ಕಿಚ್ಚು ಹಚ್ಚಿದಂತಾಗಿದೆ. ಒಂದು ಪ್ರೇರಣೆ, ಶಕ್ತಿ ಲಭಿಸಿದೆ. ಇದೇ 5ರಂದು ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಇದೆ. ಏ.7ರಂದು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಅಲ್ಲಿಂದ ನಮ್ಮ ಹೋರಾಟ ಮುಂದಕ್ಕೆ ಸಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here