ಫಿನಾಲೆ ಟಿಕೆಟ್ ಟೆನ್ಶನ್: ಎರಡು ತಂಡಗಳ ಮಧ್ಯೆ ಕಿತ್ತಾಟ – ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

0
Spread the love

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ, ಮಂಜು, ಧನರಾಜ್ ಟಿಕೆಟ್ ಟು ಫಿನಾಲೆ ರೇಸ್​ನಲ್ಲಿ ಇದ್ದಾರೆ. ಬಿಗ್ ಬಾಸ್​ನಲ್ಲಿ ಸದ್ಯ 9 ಸ್ಪರ್ಧಿಗಳು ಇದ್ದಾರೆ. ಐ ಪೈಕಿ ಫಿನಾಲೆ ತಲುಪೋದು ಐವರು ಮಾತ್ರ. ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ. ಸದ್ಯ ಫಿನಾಲೆ ಟಿಕೆಟ್ ಟಾಸ್ಕ್​ ಕೂಡ ನಡೆಯುತ್ತಿದ್ದು, ಒಬ್ಬರಿಗೆ ಟಿಕೆಟ್ ಸಿಗಲಿದೆ.

Advertisement

ಇನ್ನೂ ಇಂದಿನ ಟಾಸ್ಕ್​ನಲ್ಲಿ ಒಂದು ಸಂಖ್ಯೆಯನ್ನು ಸೂಚಿಸುತ್ತಾರೆ. ಆ ಸಂಖ್ಯೆಗೆ ಮೀಸಲಿರುವ ಚೆಂಡುಗಳನ್ನು ತೆಗೆದುಕೊಂಡು ಸ್ಪರ್ಧಿಗಳು ತಮ್ಮ ಟೀಮ್​ನ ಬಾಸ್ಕೆಟ್​ನಲ್ಲಿ ಹಾಕಬೇಕಾಗಿದೆ. ಒಂದು ತಂಡದಲ್ಲಿ ಮೂವರು ಎನ್ನುವಂತೆ 2 ಟೀಮ್​ಗಳನ್ನು ರೆಡಿ ಮಾಡಿದ್ದು ಅವರ ಕಾಲಿಗೆ ಹಗ್ಗಗಳನ್ನು ಕಟ್ಟಲಾಗಿದೆ.

ಈ ಗೇಮ್ ಆಡುವಾಗ ಭವ್ಯ ಅವರನ್ನು ಮಂಜು ತಳ್ಳಿದ್ದು ಇದಕ್ಕೆ ಭವ್ಯ ಕೋಪಗೊಂಡಿದ್ದಾರೆ. ಮೂಗಿಗೆ ಭವ್ಯ ಹೊಡೆದಿರುವುದನ್ನ ಮಂಜು ಪ್ರಶ್ನೆ ಮಾಡಿದ್ದಕ್ಕೆ ಬೇರೆಯವರಿಗೆ ಹೇಳುವುದಕ್ಕೂ ಮುಂಚೆ, ನೀವು ಮೊದಲು ಕರೆಕ್ಟ್ ಆಗಿ ಆಟ ಆಡಿ ಎಂದು ಗಟ್ಟಿ ಧ್ವನಿಯಲ್ಲೇ ಭವ್ಯ ಹೇಳಿದ್ದಾರೆ. ಇದಕ್ಕೆ ಮಂಜು ನನಗೆ ಜ್ಞಾನ ಇದೆ ರಜತ್ ಎಂದಿದ್ದಾರೆ.

ಮಂಜು ಎಲ್ಲರನ್ನು ಓವರ್​​ ಟೇಕ್ ಮಾಡಿ ಚೆಂಡುಗಳನ್ನು ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಈ ವೇಳೆ ಕ್ಯಾಪ್ಟನ್ ರಜತ್ ನೀನು ಆಡುತ್ತಿರುವುದು ತಪ್ಪು ಎಂದು ಹೇಳಿದ್ದಾರೆ. ಎಲ್ಲ ಸ್ಪರ್ಧಿಗಳು ಚೆಂಡಿಗಾಗಿ ಒಬ್ಬರ ಮೇಲೆ ಒಬ್ಬರು ಬಿದ್ದು ಟಾಸ್ಕ್​ ಪೂರ್ಣಗೊಳಿಸಲು ಹರಸಾಹಸ ಪಡುತ್ತಿದ್ದಾರೆ. ಎರಡು ತಂಡಗಳ ಮಧ್ಯೆ ಕಿತ್ತಾಟ ಜೋರಾಗಿದೆ. ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಸ್ಪರ್ಧಿಗಳು ಬಂದಿದ್ದಾರೆ. ಮುಂದೇನು ಎನ್ನುವ ಪ್ರಶ್ನೆ ಸ್ಪರ್ಧಿಗಳಲ್ಲಿ ಮೂಡಿದೆ.

 


Spread the love

LEAVE A REPLY

Please enter your comment!
Please enter your name here