HomeGadag Newsದಾಖಲಾಗದೇ ಉಳಿದಿರುವ ಪ್ರಕರಣ ಪತ್ತೆ ಮಾಡಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ದಾಖಲಾಗದೇ ಉಳಿದಿರುವ ಪ್ರಕರಣ ಪತ್ತೆ ಮಾಡಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಯಾವುದೇ ನಾಯಿ ಕಡಿತದ ಪ್ರಕರಣಗಳು ದಾಖಲಾಗದೇ ಇದ್ದಲ್ಲಿ ಅಂತಹ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖಾಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಬೇಕು. ಇದರ ವರದಿಯನ್ನು ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಸಭೆಯಲ್ಲಿ ಮಾಹಿತಿ ಒದಗಿಸಬೇಕು. ನೀರಿನ ಮಾದರಿ ವಿಶ್ಲೇಷಣೆಗೆ ಸಂಬಂಧಿಸಿದಂತೆ ಕೇಂದ್ರೀಯ ಅಂತರ್ಜಲ ಮಂಡಳಿ ನೀರಿನ ಮಾದರಿ ರಾಸಾಯನಿಕ ವಿಶ್ಲೇಷಣೆ ಮಾಡಿದ್ದು, ಕೆಲವೊಂದು ಕಡೆ ಅರ್ಸೆನಿಕ್ ಹಾಗೂ ಯುರೇನಿಯಂ ಪ್ರಮಾಣ ಪರಿಮಿತಿಗಿಂತ ಹೆಚ್ಚಾಗಿರುವುದು ಕಂಡು ಬಂದಿರುತ್ತದೆ. ಅಂತಹ ಸ್ಥಳಗಳನ್ನು ಗುರುತಿಸಿ ಮಾದರಿಗಳನ್ನು ಶೇಖರಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಜಿಲ್ಲೆಯಲ್ಲಿ ಜನವರಿ 2025ರಿಂದ ನವೆಂಬರ್ 2025ರವರೆಗೆ 3929 ಕರುಳು ಬೇನೆ, 3774 ಟೈಫಾಯಿಡ್, 47 ಹೆಪಟೈಟಿಸ್-ಎ, 118 ಡೆಂಘಿ ಹಾಗೂ 3 ಚಿಕುನ್ ಗುನ್ಯಾ ಪ್ರಕರಣಗಳು ವರದಿಯಾಗಿವೆ. ಜನವರಿ 2025ರಿಂದ ನವೆಂಬರ್ 2025ರವರೆಗೆ ಒಟ್ಟು 3,26,804 ಸಂಶಯಾಸ್ಪದ ಮಲೇರಿಯಾ ರಕ್ತದ ಲೇಪನಗಳನ್ನು ಸಂಗ್ರಹಿಸಿದ್ದು, ಅದರಲ್ಲಿ 7 ಖಚಿತ ಪ್ರಕರಣಗಳು ವರದಿಯಾಗಿವೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಹಾವು ಕಡಿತ, ಇಲಿ ಜ್ವರ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮ, ರಾಷ್ಟ್ರಿಯ ಅಯೋಡಿನ್ ಕೊರತೆಯ ನ್ಯೂನತೆಗಳ ನಿಯಂತ್ರಣಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ವೈ.ಕೆ. ಭಜಂತ್ರಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರುಡಿ, ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಡಾ. ಅರುಂಧತಿ ಕುಲಕರ್ಣಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ರಾಷ್ಟ್ರಿಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ವಿಶ್ವ ರೇಬಿಸ್ ದಿನಾಚರಣೆಯನ್ನು ಮುಂಡರಗಿಯ ಶ್ರೀ ಜಗದ್ಗುರು ತೋಂಟದಾರ್ಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 3ರಂದು ಆಚರಿಸಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೂ 9,008 ನಾಯಿಕಡಿತ ಹಾಗೂ 1,541 ಇತರೆ ಪ್ರಾಣಿಗಳ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಡಾ. ವೆಂಕಟೇಶ ರಾಠೋಡ ಸಭೆಗೆ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!