ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಿಂದ ನಡೆಸಲಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 10ನ ಸ್ಪರ್ಧಿ ತನಿಷಾ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್ಸಿ/ಎಸ್ಟಿ) ದೌರ್ಜನ್ಯ ಕಾಯ್ದೆಯಡಿ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಹೌದು, ಕನ್ನಡ ಬಿಗ್ಬಾಸ್ ಸೀಸನ್ 10 ರಿಯಾಲಿಟಿ ಶೋನ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಕಾರಣದಿಂದಾಗಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಅವರನ್ನು ಬಂಧಿಸಿ ಒಂದು ವಾರಗಳ ಕಾಲ ಜೈಲಿಗಟ್ಟಿದ್ದರು.
ಈಗ ಪುನಃ ಬಿಗ್ಬಾಸ್ನ ಇನ್ನೊಬ್ಬ ಕಂಟೆಸ್ಟಂಟ್ ತನಿಷಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈಗ ತನಿಷಾ ವಿರುದ್ಧ ಎಸ್ಸಿ/ ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಕೇಸ್ ದಾಖಲು ಮಾಡಲಾಗುದೆ.
ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವರಿಂದ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಅವರ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪ ಮಾಡಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಡಿಗೆ ಬರುವ ಬೋವಿ ಜನಾಂಗಕ್ಕೆ ಧಾರಾವಾಹಿ ನಟಿ ತನಿಷಾ ಅವರು ಅವಮಾನ ಮಾಡಿದ್ದಾರೆಂದು ದೂರು ನೀಡಲಾಗಿದೆ.
ಆದ್ದರಿಂದ ನಟಿ ತನಿಷಾ ಕುಪ್ಪುಂಡ ವಿರುದ್ದ ದೂರು ದಾಖಲಿಸಿ ಅವರ ವಿರುದ್ಧ ಕ್ರಮವನ್ನು ಕೈಗೊಂಡು ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕು ಎಂದು ಆಗ್ರಹಿಸಲಾಗಿದೆ.