ಎಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿ: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ಚಾಲಕ ಪಾರು!

0
Spread the love

ಆನೇಕಲ್:- ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಗೋಪಸಂದ್ರದ ಗೇಟ್ ಬಳಿ ಕಾರೊಂದು ಹೊತ್ತಿ ಉರಿದಿದೆ.

Advertisement

ಕಾರಿನ ಎಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕಾರಿನ ತುಂಬಾ ವ್ಯಾಪಿಸಿ ರಸ್ತೆಯಲ್ಲಿ ಕಾರು ಹೊತ್ತಿ ಉರಿದಿದೆ. ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಏಕಾಏಕಿ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಕಾರಿನ ಕೆಲವು ಭಾಗಗಳನ್ನು ಆವರಿಸಿದ್ದು, ಕಾರಿನಲ್ಲಿದ್ದ ಚಾಲಕ ಕೂಡಲೇ ಕೆಳಗೆ ಇಳಿದಿದ್ದಾನೆ.

ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನೇಕಲ್‌ನ ಗೋಪಸಂದ್ರದಿಂದ ಮುತ್ತಾನಲ್ಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಘಟನೆಯಿಂದಾಗಿ ದೊಮ್ಮಸಂದ್ರ ರಸ್ತೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿತ್ತು. ಇನ್ನು ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here