ಬೆಂಗಳೂರು;- ಕೋರಮಂಗಲದಲ್ಲಿ ಮಡ್ ಕೆಫೆ ಬಾರ್ನಲ್ಲಿ ಅಗ್ನಿ ದುರಂತ ನಡೆದಿತ್ತು. ಈ ಘಟನೆ ಬಹಳಷ್ಟು ಚರ್ಚೆ ಆಗಿತ್ತು. ಅದರ ಬೆನ್ನಲ್ಲೆ ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳುವ ಜೊತೆಗೆ ನಿಯಮ ಮೀರಿದ ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳ ಪರಿಶೀಲನೆ ನೋಟಿಸ್ ಜಾರಿ ಮಾಡಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಸಂಬಂಧಿಸಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಅಕ್ಟೊಬರ್ 22ರಂದು ತಪಾಸಣೆ ನಡೆಸಲಾಗಿದೆ. ನ್ಯೂನ್ಯತೆಗಳು ಕಂಡು ಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್ ಜಾರಿಮಾಡಲಾಗಿದೆ. ಜೊತೆಗೆ ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳನ್ನು ಸ್ಥಳದಲ್ಲೇ ಮುಚ್ಚಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಸುಮಾರು 157 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 74 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಿ 10 ಉದ್ದಿಮೆಗಳನ್ನು ಮುಚ್ಚಲಾಗಿರುತ್ತದೆ. ನೋಟಿಸ್ ಜಾರಿ ಮಾಡಿದ್ದರ ಕುರಿತು ಪೂರ್ಣ ವಿವರ ಇಲ್ಲಿದೆ.
ಒಟ್ಟು ಎಂಟು ವಲಯಗಳ ಪೈಕಿ ಬೊಮ್ಮನಹಳ್ಳಿಯಲ್ಲಿ ನಾಲ್ಕು ನೋಟಿಸ್ ಜಾರಿ ಮಾಡಲಾಗಿದೆ. ದಾಸರಹಳ್ಳಿಯಲ್ಲಿ ಒಟ್ಟು 22 ಬಾರ್, ಪಬ್ ರಸ್ಟೋರೆಂಟ್ ಗಳ ಮೇಲೆ ಪರಿಶೀಲಿಸಲಾಯಿತು. ಅದರಲ್ಲಿ ಹತ್ತು ಮಳಿಗೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಇನ್ನೂ ಬೆಂಗಳೂರು ಪೂರ್ವ ವಲಯದಲ್ಲಿ ಒಟ್ಟು 36 ಮಳಿಗೆಗಳ ಪರಿಶೀಲನೆ ನಡೆಸಲಾಗಿದೆ. ಒಟ್ಟು 24 ನೋಟಿಸ್ ಜಾರಿ ಮಾಡಲಾಗಿದೆ. ಇದರಲ್ಲಿ ಪಬ್ ಬಾರ್ ರೆಸ್ಟೋರೆಂಟ್ ಸೇರಿ ಒಟ್ಟು ಏಳು ಬಂದ್ ಮಾಡಿಸಲಾಗಿದೆ. ಮಹಾದೇವಪುರದಲ್ಲಿ ಆರು ಮಳಿಗೆಗಳಿಗೆ ನೋಟಿಸ್ ನೀಡಲಾಗಿದೆ.ಆರ್ಆರ್ ನಗರ ವಲಯದಲ್ಲಿ 3, ದಕ್ಷಿಣ ವಲಯದಲ್ಲಿ 08, ಪಶ್ಚಿಮ ವಲಯದಲ್ಲಿ 02 ಹಾಗೂ ಯಲಹಂಕ ವ್ಯಾಪ್ತಿಯಲ್ಲಿ 17 ನೋಟಿಸ್ ಜಾರಿ ಮಾಡಲಾಗಿದ