HomeSports Newsಆಟಗಾರರ ಬಸ್‌ನಲ್ಲಿ ಬೆಂಕಿ: ಫೈನಲ್ ಸೋಲಿನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್‌ಗೆ ಮತ್ತೊಂದು ಶಾಕ್!

ಆಟಗಾರರ ಬಸ್‌ನಲ್ಲಿ ಬೆಂಕಿ: ಫೈನಲ್ ಸೋಲಿನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್‌ಗೆ ಮತ್ತೊಂದು ಶಾಕ್!

For Dai;y Updates Join Our whatsapp Group

Spread the love

ಅಹಮದಾಬಾದ್‌: ಐಪಿಎಲ್‌ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಸೋತು ನಿರಾಸೆ ಅನುಭವಿಸಿದ್ದ ಗುಜರಾತ್ ಟೈಟಾನ್ಸ್ ತಂಡ ಮತ್ತೊಂದು ಆತಂಕಕಾರಿ ಘಟನೆಯಿಂದ ಪಾರಾಗಿದೆ.

ಪಂದ್ಯ ಮುಗಿದ ಬಳಿಕ ಹೋಟೆಲ್‌ಗೆ ತೆರಳುತ್ತಿದ್ದ ವೇಳೆ ಆಟಗಾರರು ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ನರೇಂದ್ರ ಮೋದಿ ಕ್ರೀಡಾಂಗಣದಿಂದ ಹೋಟೆಲ್‌ಗೆ ತೆರಳುತ್ತಿದ್ದ ವೇಳೆ ಬಸ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಕಾರಣದಿಂದ ಆಟಗಾರರು ಸುಮಾರು ಒಂದು ಗಂಟೆ ಕಾಲ ಬಸ್‌ನಲ್ಲೇ ಸಿಲುಕಿಕೊಂಡಿದ್ದರು.

ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ, ಆಟಗಾರರನ್ನು ಸುರಕ್ಷಿತವಾಗಿ ಮತ್ತೊಂದು ಬಸ್‌ಗೆ ಸ್ಥಳಾಂತರಿಸಿದರು. ಅದೃಷ್ಟವಶಾತ್ ಯಾವುದೇ ಆಟಗಾರರಿಗೆ ಅಥವಾ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಈ ಘಟನೆ ಐಪಿಎಲ್‌ ಫೈನಲ್‌ನಲ್ಲಿ ಸೋಲಿನ ಆಘಾತದಿಂದ ಹೊರಬರದಿದ್ದ ಗುಜರಾತ್ ಟೈಟಾನ್ಸ್ ತಂಡಕ್ಕೆ ಮತ್ತೊಂದು ಸಂಕಷ್ಟವನ್ನು ತಂದೊಡ್ಡಿದೆ. ಪ್ಲೇಆಫ್ ಹಂತದಿಂದಲೇ ನಿರಂತರ ಪ್ರಯಾಣ, ಬಿಗಿಯಾದ ವೇಳಾಪಟ್ಟಿ ಹಾಗೂ ಪ್ರತಿಕೂಲ ಹವಾಮಾನದಿಂದ ತಂಡ ಸಾಕಷ್ಟು ಒತ್ತಡ ಅನುಭವಿಸಿತ್ತು ಎನ್ನಲಾಗಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 155 ರನ್‌ ಗಳಿಸಿತ್ತು. ಗುರಿ ಬೆನ್ನತ್ತಿದ ಆರ್‌ಸಿಬಿ 18 ಓವರ್‌ಗಳಲ್ಲೇ 161 ರನ್‌ ಕಲೆಹಾಕಿ ಸತತ ಎರಡನೇ ಬಾರಿಗೆ ಐಪಿಎಲ್‌ ಚಾಂಪಿಯನ್ ಪಟ್ಟ ಅಲಂಕರಿಸಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!