ದಾವಣಗೆರೆ:- ಜಿಲ್ಲೆ ನ್ಯಾಮತಿ ತಾಲೂಕಿನ ಕುರುವ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ತಾನು ಬೆಳೆದಿದ್ದ ತಾಳೆ ಬೆಳೆಯನ್ನು ರಕ್ಷಣೆ ಮಾಡಲು ಹೋಗಿ ರೈತ ಸಜೀವ ದಹನವಾಗಿರುವ ಘಟನೆ ಜರುಗಿದೆ.
ಈಶ್ವರಪ್ಪ (75) ಮೃತ ರೈತ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುರುವ ಗ್ರಾಮದ ಈಶ್ವರಪ್ಪ ತನ್ನ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ತಾಳೆ ಮರ ಬೆಳೆದಿದ್ದ. ಆದರೆ ಏಕಾಏಕಿ ತಾಳಿ ಮರಗಳಿಗೆ ಬೆಂಕಿ ಹೊತ್ತಿಕೊಂಡಿದೆ.
ಇದರಿಂದ ಗಾಬರಿಗೊಂಡ ರೈತ ಈಶ್ವರಪ್ಪ ತಾನು ಹಾಕಿದ್ದ ತಾಳೆ ಉಳಿಸಲುಕೊಳ್ಳಲು ಮುಂದಾಗಿದ್ದಾನೆ. ಆದ್ರೆ, ದುರ್ವೈವ ಬೆಂಕಿಯಲ್ಲಿ ತಾಳೆ ಜೊತೆ ರೈತ ಈಶ್ವರಪ್ಪ ಸಹ ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.



