ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಫೈರೋಜ್‌ಗೆ ಪೊಲೀಸರ ಗುಂಡೇಟು

0
Spread the love

ಸ್ಥಳ ಪರಿಶೀಲನೆ ವೇಳೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ ಫೈರೋಜ್…. ಪಿಎಸ್ಐ ಶಿವಾನಂದ ಪಾಟೀಲರಿಂದ ಗುಂಡೇಟು….

ವಿಜಯಸಾಕ್ಷಿ ಸುದ್ದಿ, ಗದಗ

ನಗರಸಭೆ ಉಪಾಧ್ಯಕ್ಷರ ಪುತ್ರ ಸೇರಿದಂತೆ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ವೇಳೆ ಆರೋಪಿಯೊಬ್ಬನಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ‌ಮಧ್ಯಾಹ್ನ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರ್ಲಗೇರಿ ಗ್ರಾಮದ ಬಳಿ ನಡೆದಿದೆ.

ಸ್ಥಳೀಯ ರಾಜೀವ್ ಗಾಂಧಿ ನಗರದ ಆರೋಪಿ ಫೈರೋಜ್ ಸೇರಿದಂತೆ ಕೊಲೆ ಆರೋಪಿಗಳನ್ನು ಕರೆದುಕೊಂಡು ಸ್ಥಳ ಪರಿಶೀಲನೆ ನಡೆಸುವಾಗ ಗದಗ ಗ್ರಾಮೀಣ ಠಾಣೆಯ ಪಿಎಸ್ಐ ಶಿವಾನಂದ ಪಾಟೀಲ ಸೇರಿದಂತೆ ಕೆಲ ಪೊಲೀಸರ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ ರಕ್ಷಣೆಗಾಗಿ ಪಿಎಸ್ಐ ಶಿವಾನಂದ ಪಾಟೀಲ ಗಾಳಿಯಲ್ಲಿ ಗುಂಡು ಹೊಡೆದು ಪರಾರಿಯಾಗದಂತೆ ಎಚ್ಚರಿಕೆ ನೀಡಿದರೂ ಆರೋಪಿ ಫೈರೋಜ್ ನಿಲ್ಲದಿದ್ದಾಗ ಕಾಲಿಗೆ ಗುಂಡು ಹೊಡೆದಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಪಿಎಸ್ಐ ಶಿವಾನಂದ ಪಾಟೀಲ ನರಗುಂದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಆರೋಪಿ ಫೈರೋಜ್‌ಗೆ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಎಪ್ರಿಲ್ 19ರಂದು ಗದಗ ನಗರದ ದಾಸರಗಲ್ಲಿಯಲ್ಲಿ ನಗರಸಭೆ ಉಪಾಧ್ಯಕ್ಷರ ಪುತ್ರ ಕಾರ್ತಿಕ ಹಾಗೂ ಸಂಬಂಧಿಕರಾದ ಪರಶುರಾಮ, ಲಕ್ಷ್ಮೀ ‌ಹಾಗೂ ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

ಪ್ರಕರಣದ ಎ2 ಆರೋಪಿ ಫೈರೋಜ್ ಹಾಗೂ ಆತನ ಗ್ಯಾಂಗ್‌ನಿಂದ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋದಾಗ ಈ ಘಟನೆ ನಡೆದಿದೆ.

ಈ ಕುರಿತು ಗದಗ ಎಸ್ಪಿ ಬಿ.ಎಸ್. ನೇಮಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here