ಬೆಂಗಳೂರು: ಮುಖ್ಯಮಂತ್ರಿ ಆಗಿ ಒಂದು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಕನಕಪುರಕ್ಕೆ ತೆರಳುವ ಮುನ್ನ ಸಿಎಂ ಡಿಕೆ ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್ ಹಾಗೂ ಸಹೋದರ ಡಿಕೆ ಸುರೇಶ್ ಸೇರಿದಂತೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಉಪಹಾರ ಕೂಟದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು ಎಂಬುದು ಗಮನಾರ್ಹವಾಗಿದೆ. ನಂತರ ಇಬ್ಬರು ನಾಯಕರು ಹಾಗೂ ಕುಟುಂಬ ಸದಸ್ಯರು ಒಟ್ಟಿಗೆ ಉಪಹಾರ ಸೇವಿಸಿ ಅನೌಪಚಾರಿಕ ಮಾತುಕತೆ ನಡೆಸಿದರು.
ಈ ವೇಳೆ ಪರಸ್ಪರ ಉಡುಗೊರೆ ವಿನಿಮಯವೂ ನಡೆದಿದ್ದು, ನಾಯಕರು ಪರಸ್ಪರ ಗೌರವ ಹಾಗೂ ಬಾಂಧವ್ಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜಕೀಯವಾಗಿ ಮಹತ್ವದ ಈ ಭೇಟಿ, ರಾಜ್ಯದ ನಾಯಕತ್ವದೊಳಗಿನ ಒಗ್ಗಟ್ಟು ಮತ್ತು ಸೌಹಾರ್ದ ಸಂದೇಶವಾಗಿ ಪರಿಗಣಿಸಲಾಗುತ್ತಿದೆ.



