ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಕಾರ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜರೋಹಣವನ್ನು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಜಿಲ್ಲಾ ಉಪಾಧ್ಯಕ್ಷೆ ಜಯಶ್ರೀ ಉಗಲಾಟದ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಿರ್ಮಲಾ ಕೊಳ್ಳಿ, ಮಾಜಿ ಅಧ್ಯಕ್ಷೆ ಅಶ್ವಿನಿ ಜಗತಾಪ್, ಪ್ರಮುಖರಾದ ಜಗನ್ನಾಥಸಾ ಭಾಂಡಗೆ, ಸಿದ್ದು ಪಲ್ಲೇದ, ಮಂಜುನಾಥ ಶಾಂತಗೇರಿ, ಗದಗ ನಗರ ಮಂಡಲ ಉಪಾಧ್ಯಕ್ಷೆ ಚನ್ನಮ್ಮ ಹುಳಕಣ್ಣವರ, ಪದ್ಮಿನಿ ಮುತ್ತಲದಿನ್ನಿ, ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ, ಪ್ರಧಾನ ಕಾರ್ಯದರ್ಶಿ ಸ್ವಾತಿ ಅಕ್ಕಿ, ಪುಷ್ಪಾ ಪೂಜಾರ, ರೇಖಾ ಗೌಳಿ, ಅಪ್ಪಣ್ಣ ಟೆಂಗಿನಕಾಯಿ, ಕೆ.ಪಿ. ಕೋಟಿಗೌಡ್ರ, ಮೇಘನಾ ಕೊಟ್ಟೂರ, ದೇವೇಂದ್ರಪ್ಪ ಹೂಗಾರ, ವಿನೋದ ಹಂಸನೂರ ಮುಂತಾದವರು ಉಪಸ್ಥಿತರಿದ್ದರು.



