ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ: ಇಲ್ಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ!

0
Spread the love

ಮಂಡ್ಯ:- ರಾಜ್ಯದ ಹಳೇ ಮೈಸೂರು ಭಾಗದ ಜೀವನಾಡಿ, ನಾಲ್ಕಾರು ಜಿಲ್ಲೆಗಳಿಗೆ ಕುಡಿಯುಲು ಹಾಗೂ ನೀರಾವರಿಗೆ ನೀರು ಒದಗಿಸುವ ಕಾವೇರಿ ನೀರಿಗೆ ಅಡ್ಡಲಾಗಿ ಕಟ್ಟಿರುವ ಕೃಷ್ಣ ರಾಜ ಸಾಗರ ಜಲಾಶಯ ಒಳಹರಿವು ಹೆಚ್ಚಾದಂತೆ ಹೊರ ಹರಿವು ಕೂಡ ಏರಿಕೆ ಆಗಿದೆ. ಮಂಗಳವಾರ ಸಂಜೆಯಷ್ಟೇ 15000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.

Advertisement

ನಗರದಲ್ಲಿ ಭಾರೀ ಮಳೆ ಹಿನ್ನೆಲೆ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕೆಆರ್‌ಎಸ್ ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಹಿನ್ನೆಲೆ, ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಇಲ್ಲಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್‍ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ನದಿ ಪಾತ್ರದ ಪ್ರಮುಖ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here