ಬೆಳಗಾವಿ:- ಭ್ರೂಣಗಳ ಹತ್ಯೆ ತಡೆಯಲು, ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ತೀವ್ರ ನಿಗಾ ವಹಿಸಲು ರಾಜ್ಯಮಟ್ಟದ ಕಾರ್ಯ ಪಡೆ ರಚನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಹೆಣ್ಣು ಭ್ರೂಣ ಹತ್ಯೆ ಕುರಿತು ಪರಿಷತ್ನಲ್ಲಿ ಜೆಡಿಎಸ್ನ ಕೆ.ಎ.ತಿಪ್ಪೇಸ್ವಾಮಿ, ಬಿ.ಎಂ.ಫಾರೂಖ್, ಟಿ.ಎ.ಶರವಣ, ಸಿ.ಎನ್.ಮಂಜೇಗೌಡ , ಕಾಂಗ್ರೆಸ್ನ ಉಮಾಶ್ರೀ, ಬಿಜೆಪಿಯ ಭಾರತಿ ಶೆಟ್ಟಿ ಪ್ರಸ್ತಾಪಿಸಿದರು.
ಈ ಕುರಿತು ಸಚಿವರು ಸದನಕ್ಕೆ ಮಾಹಿತಿ ನೀಡಿ, ರಾಜ್ಯದಲ್ಲಿ 6,395 ಸ್ಕ್ಯಾನಿಂಗ್ ಸೆಂಟರ್ ನೋಂದಣಿಯಾಗಿದ್ದು, ಅದರಲ್ಲಿ 6068 ಖಾಸಗಿ, 327 ಸರ್ಕಾರಿ ಸ್ಕ್ಯಾನಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿವೆ. ಬಾಲಿಕಾ ಸಾಫ್ಟ್್ಟೇರ್ ಮೂಲಕ ನೋಂದಣಿ ಕಡ್ಡಾಯಗೊಳಿಸಲಾಗುತ್ತಿದೆ. ಪಿಸಿ ಮತ್ತು ಪಿಎನ್ಡಿಟಿ ಕಾಯ್ದೆ ಅಡಿ ಎಲ್ಲ ಶಾಸನಬದ್ಧ ಸಮಿತಿಗಳು ರಾಜ್ಯ,
ಜಿಲ್ಲಾ ಮಟ್ಟದಲ್ಲಿ ರಚನೆಗೊಂಡಿವೆ. ಈ ಸಮಿತಿಗಳು ಪ್ರತಿ 3 ತಿಂಗಳಿಗೊಮ್ಮೆ ಸ್ಕಾಯನಿಂಗ್ ಸೆಂಟರ್ ತಪಾಸಣೆ ನಡೆಸಲಿವೆ. ಇಲ್ಲಿಯವರೆಗೆ 4,408 ಸ್ಕಾಯನಿಂಗ್ ಸೆಂಟರ್ಗಳನ್ನು ತಪಾಸಣೆ ನಡೆಸಲಾಗಿದೆ. ಈ ವೇಳೆ ಸಾಕಷ್ಟು ಪ್ರಮಾಣದಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿರುವುದು ಬೆಳಕಿಗೆ ಬಂದಿದು, 100 ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 24 ಪ್ರಕರಣಗಳನ್ನು ದಂಡ ವಿಧಿಸಿ ಖುಲಾಸೆಗೊಳಿಸಲಾಗಿದೆ ಎಂದರು.