ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಕುಟುಂಬಸ್ಥರೊಂದಿಗೆ ಭೇಟಿ ನೀಡಿದ್ದಾರೆ.
Advertisement
ತಮ್ಮ ಮೊಮ್ಮಗ, ಸಂಸದ ಬಿವೈ ರಾಘವೇಂದ್ರ ಅವರ ಮಗನ ಮದುವೆ ಆಮಂತ್ರಣ ನೀಡಲು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಆಗಮಿಸಿದ್ದರು.
ಈ ವೇಳೆ ರಾಯರ ವೃಂದಾವನ, ಮಂಚಾಲಮ್ಮ ದೇವಿಗೆ ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರನ್ನು ಭೇಟಿಯಾಗಿ ಮೊಮ್ಮಗನ ಮದುವೆ ಆಹ್ವಾನಿಸಿದರು. ಈ ವೇಳೆ ಶ್ರೀಗಳು ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.