ಉಡುಪಿ: ಮಾಜಿ ಕ್ರಿಕೆಟಿಗ, ಖ್ಯಾತ ಕಮೆಂಟೇಟರ್ ರವಿಶಾಸ್ತ್ರಿ ಕಾರ್ಕಳ ತಾಲೂಕಿನ ಎರ್ಲಪಾಡಿ ಕರ್ವಾಲು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಬೇಟಿ ನೀಡಿದ್ದಾರೆ. ರವಿಶಾಸ್ತ್ರಿ ಅವರ ಪೂರ್ವಜರು ಕಾರ್ಕಳ ತಾಲೂಕಿನ ಎರ್ಲಪಾಡಿಯವರು.
Advertisement
14 ವರ್ಷಗಳ ಹಿಂದೆ ಪತ್ನಿ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ್ದ ರವಿಶಾಸ್ತ್ರಿ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಎರ್ಲಪಾಡಿ ಕ್ಷೇತ್ರ ದೇವರ ಆಶೀರ್ವಾದದಿಂದ ಈ ದಂಪತಿ ಮಗಳನ್ನು ಪಡೆದಿದ್ದರು. ಅಂದಿನಿಂದ ಇಂದಿನವರೆಗೆ ರವಿಶಾಸ್ತ್ರಿಪ್ರತಿವರ್ಷ ಒಂದೆರಡು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸುತ್ತಿದ್ದಾರೆ.