HomeKarnataka Newsಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ!

ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ!

For Dai;y Updates Join Our whatsapp Group

ಹಾವೇರಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ 80 ವರ್ಷದ ಮನೋಹರ್ ತಹಶೀಲ್ದಾರ್ ಅವರು ಇಂದು ವಿಧಿವಶರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.

ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್​ನ ಎನ್​​ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಇತ್ತಿಚಿಗೆ ಸಂಸದ ಬಸವರಾಜ್ ಬೊಮ್ಮಾಯಿ ಅವರು ಮನೋಹರ್ ಅವರು ಆಸ್ಪತ್ರೆಗೆ ಬೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಆದರೆ ದುರಾದೃಷ್ಟವಶಾತ್ ಮಧ್ಯ ರಾತ್ರಿ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img