ಬೆಂಗಳೂರು: ಯತ್ನಾಳ್ ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ. ರಾಜ್ಯ ನಾಯಕರಿಂದ, ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ.
Advertisement
ಹಾಗಾಗಿ, ಅದು ಪಕ್ಷದ ಹೋರಾಟ ಆಗುವುದಿಲ್ಲ ಎಂದರು.ಇನ್ನೂ ಯತ್ನಾಳ್ ಮಾಡುವ ಹೋರಾಟ ಪಕ್ಷದ ಅಶಿಸ್ತು ಕೂಡ ಆಗುತ್ತದೆ. ಇಲ್ಲಿನವರೆಗೆ ರಾಜ್ಯದ ಹಂತದಲ್ಲೇ ಸಮಸ್ಯೆ ಸರಿಪಡಿಸುವ ಪ್ರಯತ್ನ ಮಾಡಿದ್ದೆವು. ಅದನ್ನು ಅವರು ಒಪ್ಪಿಕೊಳ್ಳಲಿಲ್ಲ. ಯತ್ನಾಳರ ಈ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ಹೇಳಿದರು.