ಬೆಂಗಳೂರು:- ರಾಜ್ಯದಲ್ಲಷ್ಟೇ ಅಲ್ಲದೇ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದ್ದ ಮುಡಾ ಹಗರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್ರನ್ನು ಬಂಧಿಸುವ ಸಾಧ್ಯತೆ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟೇಶ್ ಅವರನ್ನು ವಶಕ್ಕೆ ಪಡೆದಿರುವ ಇಡಿ, ಹೆಚ್ಚಿನ ತನಿಖೆ ಕೈಗೊಂಡಿದೆ.



