ಹುಬ್ಬಳ್ಳಿ: ಬಿಜೆಪಿಯವರಿಗೆ ಭವಿಷ್ಯ ಹೇಳುವುದೇ ಕಾಯಕವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಭವಿಷ್ಯ ಹೇಳುವುದೇ ಕಾಯಕವಾಗಿದೆ. ದೀಪಾವಳಿ ಒಳಗೆ ಸರ್ಕಾರ ಬೀಳುತ್ತದೆ ಎಂದು ಹೇಳಿದ್ದಾರೆ. ಒಂದು ವರ್ಷದಿಂದ ಇದನ್ನೇ ಹೇಳುತ್ತಿದ್ದಾರೆ. ಬೇರೆ ವಿಷಯಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ನಮಗೆ 136 ಸೀಟುಗಳಿವೆ. ಯಾವುದೇ ಕಾರಣಕ್ಕೂ ಆ ರೀತಿ ಆಗುವುದಿಲ್ಲ.
ಹಾಗೇನಾದರೂ ಆದರೆ ಕೇಂದ್ರದಲ್ಲಿ ಆಗಬಹುದು. ಯಾಕೆಂದರೆ ಅವರ ಹತ್ತಿರ ಫುಲ್ ಮೆಜಾರಿಟಿ ಇಲ್ಲ. ನಾಳೆ ಜಮ್ಮು ಕಾಶ್ಮೀರ, ಹರಿಯಾಣ, ಮಹಾರಾಷ್ಟ್ರ ಸೋಲುವ ಸಾಧ್ಯತೆ ಇದೆ. ಬಿಹಾರ ಕೂಡ ಸೋಲಬಹುದು. ಮುಂದೆ ನಾಲ್ಕು ರಾಜ್ಯಗಳ ಚುನಾವಣೆಯಾದ್ರೆ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಇರುತ್ತಾ ಎಂಬ ಪ್ರಶ್ನೆಯನ್ನು ಅವರನ್ನು ಕೇಳಬೇಕು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಬೀಳುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.