ಚಾಮರಾಜನಗರ: ಕೊಳೆತ ಸ್ಥಿತಿಯಲ್ಲಿ ಕಾಡಾನೆಯ ಕಳೇಬರ ಪತ್ತೆ!

0
Spread the love

ಚಾಮರಾಜನಗರ:- ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆಯ ಕಳೇಬರ ಪತ್ತೆಯಾಗಿರುವ ಘಟನೆ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹಿರಿಕೆರೆ ಅರಣ್ಯ ಪ್ರದೇಶದಲ್ಲಿ ಜರುಗಿದೆ.

Advertisement

ಮೃತ ಗಂಡಾನೆಗೆ ಅಂದಾಜು 35 ರಿಂದ 40 ವರ್ಷ ವಯಸ್ಸು ಎಂದು ತಿಳಿದು ಬಂದಿದೆ. ಕಾಡಾನೆಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇಲಾಖಾ ಪಶು ವೈದ್ಯಾಧಿಕಾರಿಯವರಿಂದ ಮರಣೋತ್ತರ ಶವ ಪರೀಕ್ಷೆ ನಡೆಸಿ ಮಾದರಿ ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಎಸಿಎಫ್ ನವೀನ್ ಕುಮಾರ್ ಮಾಹಿತಿ ನೀಡಿದರು.

ಮರಣೋತ್ತರ ಪರೀಕ್ಷೆ ನಂತರ ಮೃತ ಕಾಡಾನೆಯ ಕಳೇಬರಹವನ್ನು ಅರಣ್ಯ ಇಲಾಖೆ ನಿಯಮಾನುಸಾರ ಅಂತ್ಯಕ್ರಿಯೆ ಮಾಡಲಾಯಿತು.


Spread the love

LEAVE A REPLY

Please enter your comment!
Please enter your name here