ಕಾಮಗಾರಿಗಳ ಗುಣಮಟ್ಟ ಉತ್ಕೃಷ್ಟವಾಗಿರಲಿ : ಹೆಚ್.ಕೆ. ಪಾಟೀಲ್

0
Foundation laying of road and drainage works
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಸರ್ಕಾರದ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿಗಳು ನೆರವೇರಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದರು.

Advertisement

ನಗರಸಭೆ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ ಮತ್ತು ನಗರಸಭೆಯ ಸಹಯೋಗದಲ್ಲಿ 18.26 ಕೋಟಿ ರೂ.ಗಳ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಿ ಅವರು ಮಾತನಾಡಿದರು.

ನಗರಗಳಿಗೆ ಮೂಲಭೂತ ಸೌಲಭ್ಯದ ಕೊರತೆ ಸಾಕಷ್ಟಿದೆ. ಈ ಅನುದಾನದಲ್ಲಿ ಕಾಮಗಾರಿ ಪ್ರಾರಂಭಗೊಳ್ಳುವ ಮೂಲಕ ಮೂಲಭೂತ ಸೌಲಭ್ಯದ ಕೊರತೆ ಕಡಿಮೆಯಾಗಲಿದೆ. ಕಾಮಗಾರಿಗಳಿಗೆ ಸಾಕಷ್ಟು ಹಣ ಹರಿದು ಬರುತ್ತಿದೆ. ಹಾಗಾಗಿ ಕಾಮಗಾರಿಯ ಅನುಷ್ಠಾನದಲ್ಲಿ ಕೆಲಸದ ಗುಣಮಟ್ಟ ಮಾತ್ರ ಸುಧಾರಿಸಬೇಕು ಎಂದು ಅಭಿಪ್ರಾಯಪಟ್ಟರು.

Foundation laying of road and drainage works

ಲೋಕಸಭಾ ಸದ್ಯಸ ಬಸವರಾಜ ಬೊಮ್ಮಾಯಿ ಮಾತನಾಡಿ, 5 ವರ್ಷದ ಅಧಿಕಾರಾವಧಿಯಲ್ಲಿ ಎಲ್ಲಾ ಪಕ್ಷದ ಚುನಾಯಿತ ಜನ ಪ್ರತಿನಿಧಿಗಳು 59 ತಿಂಗಳು ಅಭಿವೃದ್ಧಿ ಕಡೆಗೆ ಗಮನ ಹರಿಸಿ, ಒಂದು ತಿಂಗಳು ಮಾತ್ರ ರಾಜಕೀಯ ಮಾಡಿದಾಗ ಜನರಿಗೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು.

ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಪಕ್ಷಗಳು ಬೇರೆ ಬೇರೆಯಾಗುತ್ತವೆ ಆದರೆ ಸರ್ಕಾರದ ಕಾರ್ಯಗಳು ನಿರಂತರ ನಡೆಯುವ ವ್ಯವಸ್ಥೆ. ನಾವು ಒದಗಿಸಿದ ಅನುದಾನದ ಕಾಮಗಾರಿಗಳ ಆಡಳಿತಾತ್ಮಕ ದೋಷಗಳನ್ನು ಸರಿಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಆರಂಭವಾಗಿ ಮುಕ್ತಾಯಗೊಂಡಾಗ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ಮಾಡಲು ಸಹಾಯಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನಗರಸಭೆ ಅಧ್ಯಕ್ಷೆ ಉಷಾ ದಾಸರ ಮಾತನಾಡಿ, ನಗರೋತ್ಥಾನ ಕಾಮಗಾರಿ ಕೈಗೊಳ್ಳಲು ಅನುದಾನ ನೀಡಿದ ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ ಅವರಿಗೆ ಧನ್ಯವಾದ ತಿಳಿಸಿದರಲ್ಲದೆ, ಈ ಅನುದಾನದಿಂದ ತಾವು ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಸಿ. ಪಾಟೀಲ್, ಡಾ. ಚಂದ್ರು ಲಮಾಣಿ, ಎಸ್.ವಿ. ಸಂಕನೂರು, ಉಪಾಧ್ಯಕ್ಷೆ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್, ನಗರ ಸಭೆ ವಿರೋಧ ಪಕ್ಷದ ನಾಯಕ ಎಲ್.ಡಿ. ಚಂದಾವರಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್., ನಗರಸಭೆ ಪೌರಾಯುಕ್ತ ಪ್ರಶಾಂಶ ವರಗಪ್ಪನವರ, ಮಾರುತಿ ಬ್ಯಾಕೊಡ್ ಸೇರಿದಂತೆ ನಗರಸಭೆಯ ಸದ್ಯಸರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು.

ಗದಗ ಜಿಲ್ಲೆ ರಾಜ್ಯದಲ್ಲಿ ಪ್ರಮುಖ ನಗರ ಹಾಗೂ ಭವಿಷ್ಯದ ನಗರವಾಗಿದೆ. ಅಭಿವೃದ್ಧಿಯಲ್ಲಿ ಯೋಜನಾಬದ್ಧವಾಗಿ ಕಾರ್ಯ ಮಾಡಿದರೆ, ಮಹಾನಗರ ಔದ್ಯೋಗಿಕ ಕೇಂದ್ರವಾಗಿ ಮಾರ್ಪಾಡಾಗಲಿದೆ. ಎಲ್ಲಾ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆ ಮೂಲಕ ವಿಕೇಂದ್ರೀಕರಣ ಸಾಧ್ಯ. ಬದಲಾವಣೆಗಳನ್ನು ಜನರು ನಿರೀಕ್ಷೆ ಮಾಡುತ್ತಾರೆ. ಅವರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡೋಣ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಿ, ಕಾಮಗಾರಿಯ ಪ್ರತಿ ಹಂತದಲ್ಲೂ ಪರಿಶೀಲನೆ ಮಾಡಿ, ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಾಗ ಮಾತ್ರ ಎಲ್ಲರೂ ಜಾಗೃತಿ ವಹಿಸುತ್ತಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ನಿಗಾವಹಿಸಬೇಕು. ನಗರೋತ್ಥಾನ ಅನುದಾನ ಹೆಚ್ಚಿಗೆ ಬರಲು ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ. ಪಾಟೀಲ ಕಾರಣರಾಗಿದ್ದಾರೆ. ಶಂಕುಸ್ಥಾಪನೆ ಮಾಡಿದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ.
– ಎಚ್.ಕೆ. ಪಾಟೀಲ.
ಜಿಲ್ಲಾ ಉಸ್ತುವಾರಿ ಸಚಿವರು.


Spread the love

LEAVE A REPLY

Please enter your comment!
Please enter your name here