HomeKarnataka Newsನಾಲ್ಕು ದಿನದ ಕಾರ್ಯಾಚರಣೆ: ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕಾಡಾನೆ ಕೊನೆಗೂ ಸೆರೆ!

ನಾಲ್ಕು ದಿನದ ಕಾರ್ಯಾಚರಣೆ: ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕಾಡಾನೆ ಕೊನೆಗೂ ಸೆರೆ!

For Dai;y Updates Join Our whatsapp Group

Spread the love

ಚಿಕ್ಕಮಗಳೂರು:- ಕಳೆದ ಸಾಕಷ್ಟು ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಜನರ ನಿದ್ದೆಗೆಡಿಸಿದ್ದ ‘ಕುಳ್ಳ’ ಕಾಡಾನೆ ಕೊನೆಗೂ ಸೆರೆಯಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು ಈ ಊರಲ್ಲಿ ಇದ್ದರೆ, ನಾಳೆ ಮತ್ತೊಂದು ಊರಲ್ಲಿ ಕಾಣಿಸಿಕೊಂಡು ದಾಂಧಲೆ ಮಾಡುತ್ತಿದ್ದ ಕುಳ್ಳ ಕಾಡಾನೆ ಕೊನೆಗೂ ಲಾಕ್ ಆಗಿದೆ. ನಾಲ್ಕು ದಿನಗಳಿಂದ ನಡೆದ ಆಪರೇಷನ್ ಕೊನೆಗೂ ಯಶಸ್ವಿಯಾಗಿದೆ.

ಹೌದು, ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಂಚಾರ ಮಾಡಿ ಆತಂಕ ಸೃಷ್ಟಿ ಮಾಡಿದ ಕಾಡಾನೆ ಕುಳ್ಳ ಕೊನೆಗೂ ಲಾಕ್‌ ಆಗಿದೆ. ಕುಳ್ಳನ ಸೆರೆಗಾಗಿ ಕಳೆದ ನಾಲ್ಕು ದಿನದಿಂದ ಮೂಡಿಗೆರೆ ತಾಲೂಕಿನಲ್ಲಿ ಕಾರ್ಯಚರಣೆ ನಡೆದಿತ್ತು. ತನ್ನ ಹಿಡಿಯಲು ಭೀಮಾ ಟೀಮ್ ಎಂಟ್ರಿ ಯಾಗಿದೆ ಎಂಬ ಚಿಕ್ಕ ಸುಳಿವು ಸಿಗುತ್ತಿದ್ದಂತೆ ಎಸ್ಕೇಪ್ ಆಗಿದ್ದ ಕುಳ್ಳ ಕುಮ್ಕಿ ಆನೆ ಭೀಮ, ಏಕಲವ್ಯ ಟೀಮ್ ‌ನಡೆಸಿದ ಕಾರ್ಯಚರಣೆಯಲ್ಲಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ‌‌ ನಾಲ್ಕು ದಿನದಿಂದ ಭೀಮ ಟೀಮ್ ನೇತೃತ್ವದಲ್ಲಿ ಕುಳ್ಳ ಒಂಟಿ ಸಲಗದ‌ ಸೆರೆಗಾಗಿ ಕಾರ್ಯಚರಣೆ ನಡೆದಿತ್ತು. ನಿರಂತರವಾಗಿ ನಡೆದ ಕಾರ್ಯಚರಣೆಯಲ್ಲಿ ಕುಳ್ಳ ಮೂಡಿಗೆರೆ ತಾಲೂಕಿನ ಹಾಂದಿ ಬಳಿ‌ ಲಾಕ್‌ ಆಗಿದ್ದಾನೆ.

ಕುಳ್ಳ ಅಂತಾನೆ ಖ್ಯಾತಿ ಪಡೆದಿದ್ದ ಕಾಡಾನೆ, ಮಾನವರ ಮೇಲೆ ದಾಳಿಗೆ ಯತ್ನಿಸಿ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದ. ಹೆಚ್ಚು ಸಂಚಾರ ಮಾಡುತ್ತಿದ್ದ ಗ್ರಾಮಗಳಿಂದ ಕುಳ್ಳನ ಸೆರೆಗಾಗಿ ರಾಜ್ಯ ಸರ್ಕಾರಕ್ಕೆ ಚಿಕ್ಕಮಗಳೂರು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದರು. ಹಾಗಾಗಿ ಸರ್ಕಾರದಿಂದ ಸೆರೆ ಕಾರ್ಯಚರಣೆಗೆ ಅನುಮತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಕೊನೆಗೂ ಕುಳ್ಳ ನನ್ನ ಸೆರೆ ಹಿಡಿದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!