ಬೆಂಗಳೂರು:- ಉದ್ಯೋಗಿಗಳಿಗೆ ವಂಚನೆ ಎಸಗಿದ ಆರೋಪದಡಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಆಗಿದೆ.
ಘಟನೆ ಸಂಬಂಧ ಫಿಎಫ್ಓ ರಿಜಿನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಇದೇ ತಿಂಗಳು ನಾಲ್ಕರಂದು ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು ರಾಬಿನ್ ಉತ್ತಪ್ಪ ಪುಲಕೇಶಿ ನಗರದ ನಿವಾಸಿಯಾಗಿರುವ ಕಾರಣ ಅಲ್ಲಿನ ಠಾಣೆಗೆ ಪತ್ರ ಬರೆಯಲಾಗಿದೆ.
ಇನ್ನೂ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದಲ್ಲಿ ಪಿಎಫ್ ಹಣ ಕಟ್ ಮಾಡಿಕೊಂಡು ಬಳಿಕ ಉದ್ಯೋಗಿಗಳ ಖಾತೆಗೆ ಹಾಕದೇ 23 ಲಕ್ಷ ರೂ. ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹೀಗಾಗಿ ಅರೆಸ್ಟ್ ವಾರೆಂಟ್ ಜಾರಿ ಆಗಿರುವ ಕಾರಣ ಇಂದೇ ಉತ್ತಪ್ಪ ಅರೆಸ್ಟ್ ಆಗ್ತಾರಾ ಎಂಬುವುದನ್ನು ಕಾದು ನೋಡಬೇಕಾಗಿದೆ.