ವಂಚಕಿ ಐಶ್ವರ್ಯ ಕೇಸ್: ಡಿ.ಕೆ. ಸುರೇಶ್’ಗೂ ತಟ್ಟಿದ ಸಂಕಷ್ಟದ ಬಿಸಿ – ED ಸಮನ್ಸ್

0
Spread the love

ಬೆಂಗಳೂರು: ವಾರಾಹಿ ಜ್ಯುವೆಲ್ಲರಿ ಮಾಲೀಕರಿಂದ 9 ಕೋಟಿ ಗೋಲ್ಡ್ಖರೀದಿಸಿ ವಂಚನೆ ಪ್ರಕರಣಕಕ್ಕೆ ಸಮಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ. ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಸುರೇಶ್ ಅವರಿಗೆ .ಡಿ. ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.

Advertisement

ಮಾಜಿ ಸಂಸದ ಡಿಕೆ ಸುರೇಶ್ಅವರ ಸಹೋದರಿ ಅಂತ ಹೇಳಿಕೊಂಡು ಐಶ್ವರ್ಯಗೌಡ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿಬಂದಿತ್ತು. ಐಶ್ವರ್ಯಗೌಡ ಹೇಳಿಕೆ ಮತ್ತು ಸಾಕ್ಷಿಗಳನ್ನು ಆಧರಿಸಿ ಇಡಿ ಗುರುವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಡಿಕೆ ಸುರೇಶ್ಅವರಿಗೆ ಸೂಚನೆ ನೀಡಿದೆ.

ಜೂನ್ 19ರಂದು ವಿಚಾರಣೆಗೆ ಹಾಜರಾಗುವುದು ಕಷ್ಟ, ಆದ್ದರಿಂದ ಜೂನ್ 23ರಂದು ಹಾಜರಾಗುವುದಾಗಿ .ಡಿಗೆ ತಿಳಿಸಿರುವುದಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಡಿ.ಕೆ‌.ಸುರೇಶ್ ಅವರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆಎಂದು ನಂಬಿಸಿ ಸಾಲದ ರೂಪದಲ್ಲಿ ಚಿನ್ನ ಪಡೆದು ವಂಚಿಸಿದ ಆರೋಪ ಐಶ್ವರ್ಯಾ ಗೌಡ ವಿರುದ್ಧ ಕೇಳಿ ಬಂದಿತ್ತು.

ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್ ಐತಾಳ್ ಎಂಬುವವರು ನೀಡಿದ್ದ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರಬಿ ಅವರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.


Spread the love

LEAVE A REPLY

Please enter your comment!
Please enter your name here