ಕೃಷಿ ಪಂಪ್‌ʼಸೆಟ್‌ʼಗಳಿಗೆ ಉಚಿತ ವಿದ್ಯುತ್: ರೈತರಿಗೆ ಸಿಹಿಸುದ್ದಿ ಕೊಟ್ಟ ಸಚಿವ ಕೆ.ಜೆ.ಜಾರ್ಜ್

0
Spread the love

ಚಾಮರಾಜನಗರ:  ರೈತರ ಕೃಷಿ ಪಂಪ್‌ʼಸೆಟ್‌ʼಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಅನ್ನದಾತರಿಗೆ ಗುಡ್‌ ನ್ಯೂಸ್‌ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿರುವ ವರೆಗೂ, ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರ ಖಾಸಗೀಕರಣ ಆಗಲ್ಲ. ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ ಎಂದು ತಿಳಿಸಿದರು.

Advertisement

ಬೇರೆ ಕಡೆ ವಿದ್ಯುತ್ ಖರೀದಿಸಿ ರೈತರಿಗೆ ಉಚಿತ ವಿದ್ಯುತ್ ನೀಡ್ತಿದ್ದೇವೆ. ವಿದ್ಯುತ್ ಕಳ್ಳತನ ತಪ್ಪಿಸಲು ಕೃಷಿ ಪಂಪ್ ಸೆಟ್‌ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇದರಿಂದ ರೈತರಿಗೆ ಅನುಕೂಲ. ಯಾರೋ ವಿದ್ಯುತ್ ಕಳ್ಳತನ ಮಾಡಿ ರೈತರ ಮೇಲೆ ಹಾಕುತ್ತಿದ್ದರು. ಆಧಾರ್ ಲಿಂಕ್‌ನಿಂದ ಅದೆಲ್ಲಾ ತಪ್ಪಲಿದೆ. ನಮ್ಮ ಇಲಾಖೆಗೂ ಲೆಕ್ಕ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.


Spread the love

LEAVE A REPLY

Please enter your comment!
Please enter your name here