ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ಇಲ್ಲಿನ ಕೆ.ಎಚ್. ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆ ಹಾಗೂ ಹುಬ್ಬಳ್ಳಿಯ ಎಂ.ಎಂ. ಜೋಶಿ ಕಣ್ಣಿನ ಆಸ್ಪತ್ರೆಯ ಸಹಯೋಗ ಹಾಗೂ ಗದಗ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗದಗ ಇವರ ಸಹಕಾರದಲ್ಲಿ ಎಚ್.ಕೆ ಪಾಟೀಲ ಸೇವಾ ತಂಡದಿಂದ ಸೋಮವಾರದಂದು ಒಟ್ಟು 16 ಜನ ಫಲಾನುಭವಿಗಳಿಗೆ ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರ (ಮೋತಿ ಬಿಂದು) ಚಿಕಿತ್ಸೆಯನ್ನು ಹುಲಕೋಟಿಯ ಕೆ.ಎಚ್. ಪಾಟೀಲ ಆಸ್ಪತ್ರೆಯಲ್ಲಿ ನೆರವೇರಿಸಲಾಯಿತು.
ಸಂಸ್ಥೆಯ ಚೇರಮನ್ ಡಾ. ಎಸ್.ಆರ್. ನಾಗನೂರ ಹಾಗೂ ಗೌರವ ಕಾರ್ಯದರ್ಶಿ ಡಾ. ವೇಮನ್ ಆರ್.ಸಾವಕಾರ ಶಿಬಿರದಲ್ಲಿ ಉಪಸ್ಥಿತರಿದ್ದು ಮಾರ್ಗದರ್ಶನ ಮಾಡಿದರು. ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಎಂ.ಎಂ. ಜೋಶಿ ಆಸ್ಪತ್ರೆಯ ವೈದ್ಯರಿಂದ ನೆಡೆಸಲಾಯಿತು. ಇದಕ್ಕೂ ಮೊದಲು ಫಲಾನುಭವಿಗಳಿಗೆ ಉಚಿತವಾಗಿ ಬಿಪಿ, ಶುಗರ್, ರಕ್ತ ತಪಾಸಣೆ ಮಾಡಲಾಯಿತು.
ಶಿಬಿರದಲ್ಲಿ ಕೆ.ಎಚ್. ಪಾಟೀಲ ಆಸ್ಪತ್ರೆಯ ಸಿಬ್ಬಂದಿ ಪಾಲ್ಗೊಂಡು ಸಹಾಯ ಸಹಕಾರ ನೀಡಿದರು.