ವಕೀಲರ ವಿವಿಧ ಬೇಡಿಕೆಗಳನ್ನು ಈಡೇರಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಘಟಕದ ಕರೆಯ ಮೇರೆಗೆ ವಕೀಲರ ಸಹಿ ಸಂಗ್ರಹಸ ಮೂಲಕ ಪ್ರತಿಭಟಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

Advertisement

ಬಳಿಕ ವಕೀಲರ ಒಕ್ಕೂಟದ ಜಿಲ್ಲಾ ಮುಂಖಡ ಬಾಲು ರಾಠೋಡ ಮಾತನಾಡಿ, ಕರ್ನಾಟಕ ರಾಜ್ಯ ಸಂಘಟನೆಯು ರಾಜ್ಯದಲ್ಲಿ ವಕೀಲರ ಮತ್ತು ಕಾನೂನು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಚರ್ಚಿಸಿ ಹಲವು ಬೇಡಿಕೆಗಳನ್ನು ಸರಕಾರದ ಮುಂದಿಡುತ್ತಿದೆ. ಪೊಲೀಸರ ಏಕಪಕ್ಷೀಯ ವರ್ತನೆಗಳಿಂದ ವಕೀಲರಿಗೆ ರಕ್ಷಣೆ ನೀಡಬೇಕು ಮತ್ತು ವಕೀಲರ ಸಂರಕ್ಷಣೆ ಕಾಯ್ದೆ-2024ಕ್ಕೆ ಸೂಕ್ತ ತಿದ್ದುಪಡಿಯಾಗಬೇಕು. ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯದ ಮಾರ್ಗಸೂಚಿಯನ್ನು ಪಾಲಿಸಬೇಕು. ಕಾನೂನು ವಿದ್ಯಾರ್ಥಿಗಳನ್ನು ಗೊಂದಲಕ್ಕೆ ತಳ್ಳುವ ಮತ್ತು ಅವರ ಭವಿಷ್ಯವನ್ನು ಅಭದ್ರತೆಯಲ್ಲಿಡುವ ಅವೈಜ್ಞಾನಿಕ ಅಖಿಲ ಭಾರತ ಬಾರ್ ಪರೀಕ್ಷೆರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ವಕೀಲರಿಗೆ ಕಡ್ಡಾಯವಾಗಿ ವೈದ್ಯಕೀಯ ಮತ್ತು ಜೀವವಿಮಾ ಸೌಲಭ್ಯವನ್ನು ಒದಗಿಸಬೇಕು. ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ವಕೀಲರ ಅಕಾಡೆಮಿಗಳನ್ನು ಸ್ಥಾಪಿಸಬೇಕು. ಕರ್ನಾಟಕ ರಾಜ್ಯದಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಸ್ಥಾಪಿಸಲು ಮುಂದಾಗಬೇಕು. ಈಗಿರುವ ನ್ಯಾಯಾಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ರಾಜ್ಯದಲ್ಲಿನ ಎಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರಿಗೆ ಛೇಂಬರ್‌ಗಳನ್ನು ಸ್ಥಾಪಿಸಬೇಕು ಇವೇ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ತಾಲೂಕು ಮುಂಖಡರಾದ ಪೀರು ರಾಠೋಡ ಮಾತನಾಡಿ, ಈ ಅಭಿಯಾನದ ಬೇಡಿಕೆಗಳನ್ನು ಒಂದು ತಿಂಗಳೊಳಗಾಗಿ ಈಡೇರಿಸದಿದ್ದಲ್ಲಿ ನಮ್ಮ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ವಕೀಲರಾದ ಗಣೇಶ ರಾಠೋಡ, ದಾವಲ್ ತಾಳಿಕೋಟಿ, ಶಂಕರ ರಾಠೋಡ, ಪೀರು ರಾಠೋಡ, ಶಿವು ಜನ್ಯಾಜಿ ಸೇರಿದಂತೆ ವಕೀಲರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here